22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

ಬೆಳ್ತಂಗಡಿ: ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಂಗಳೂರಿನ ದಕ್ಷಿಣದದ ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಂದಗೋಕುಲ ನಿವಾಸಿಯಾಗಿರುವ ಸಿದ್ದರಾಜು ಗೌಡ ಮಗನಾದ ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯಾಗಿರುವ ಪತಿ ವಿಶ್ವನಾಥ(24) ಮತ್ತು 22 ವರ್ಷದ ಪತ್ನಿ 22-05-2025 ರಂದು ಮದುವೆಯಾಗಿದ್ದು. ಜುಲೈ 22 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರತಿಷ್ಠಿತ ಹೊಟೇಲಿಗೆ ಬಂದು ರೂಂ ಪಡೆದು ತಂಗಿದ್ದರು.

ಹೊಟೇಲ್ ರೂಂ ನಲ್ಲಿ ಜುಲೈ 22 ರಂದು ರಾತ್ರಿಯೆ ಕುಡಿದ ಮತ್ತಿನಲ್ಲಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿಗೆ ವಿರುದ್ಧ 22 ವರ್ಷದ ಪತ್ನಿ ನೇರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜುಲೈ 23 ರಂದು ಸಂಜೆ ಬಂದು ಪತಿ ವಿಶ್ವನಾಥ ಎಂಬಾತನ ವಿರುದ್ಧ ದೂರು ನೀಡಿದ್ದಾಳೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪತಿ ವಿಶ್ವನಾಥ ವಿರುದ್ಧ BNS 109,115(1), 85 ,4DP (ಕೊಲೆಯತ್ನ, ಕೈಯಿಂದ ಹಲ್ಲೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಬೇಡಿಕೆ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪತಿ ವಿಶ್ವನಾಥ್ (24) ನನ್ನು ಜುಲೈ 24 ರಂದು ಉಜಿರೆಯಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಸಿಬ್ಬಂದಿಗಳುಬಂಧಿಸಿ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರುಪಡಿಸಿದ್ದು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಧರ್ಮಸ್ಥಳ: ಶಾಂತಿವನದಲ್ಲಿ ನವೀಕರಣಗೊಂಡ ಮಹಿಳಾ ಚಿಕಿತ್ಸಾ ವಿಭಾಗ “ಸಿಂದೂರ”ಲೋಕಾರ್ಪಣೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!