September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

ಬೆಳ್ತಂಗಡಿ: ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಂಗಳೂರಿನ ದಕ್ಷಿಣದದ ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಂದಗೋಕುಲ ನಿವಾಸಿಯಾಗಿರುವ ಸಿದ್ದರಾಜು ಗೌಡ ಮಗನಾದ ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯಾಗಿರುವ ಪತಿ ವಿಶ್ವನಾಥ(24) ಮತ್ತು 22 ವರ್ಷದ ಪತ್ನಿ 22-05-2025 ರಂದು ಮದುವೆಯಾಗಿದ್ದು. ಜುಲೈ 22 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರತಿಷ್ಠಿತ ಹೊಟೇಲಿಗೆ ಬಂದು ರೂಂ ಪಡೆದು ತಂಗಿದ್ದರು.

ಹೊಟೇಲ್ ರೂಂ ನಲ್ಲಿ ಜುಲೈ 22 ರಂದು ರಾತ್ರಿಯೆ ಕುಡಿದ ಮತ್ತಿನಲ್ಲಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿಗೆ ವಿರುದ್ಧ 22 ವರ್ಷದ ಪತ್ನಿ ನೇರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜುಲೈ 23 ರಂದು ಸಂಜೆ ಬಂದು ಪತಿ ವಿಶ್ವನಾಥ ಎಂಬಾತನ ವಿರುದ್ಧ ದೂರು ನೀಡಿದ್ದಾಳೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪತಿ ವಿಶ್ವನಾಥ ವಿರುದ್ಧ BNS 109,115(1), 85 ,4DP (ಕೊಲೆಯತ್ನ, ಕೈಯಿಂದ ಹಲ್ಲೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಬೇಡಿಕೆ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪತಿ ವಿಶ್ವನಾಥ್ (24) ನನ್ನು ಜುಲೈ 24 ರಂದು ಉಜಿರೆಯಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಸಿಬ್ಬಂದಿಗಳುಬಂಧಿಸಿ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರುಪಡಿಸಿದ್ದು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya
error: Content is protected !!