23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

ಬೆಳ್ತಂಗಡಿ: ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಂಗಳೂರಿನ ದಕ್ಷಿಣದದ ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಂದಗೋಕುಲ ನಿವಾಸಿಯಾಗಿರುವ ಸಿದ್ದರಾಜು ಗೌಡ ಮಗನಾದ ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯಾಗಿರುವ ಪತಿ ವಿಶ್ವನಾಥ(24) ಮತ್ತು 22 ವರ್ಷದ ಪತ್ನಿ 22-05-2025 ರಂದು ಮದುವೆಯಾಗಿದ್ದು. ಜುಲೈ 22 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರತಿಷ್ಠಿತ ಹೊಟೇಲಿಗೆ ಬಂದು ರೂಂ ಪಡೆದು ತಂಗಿದ್ದರು.

ಹೊಟೇಲ್ ರೂಂ ನಲ್ಲಿ ಜುಲೈ 22 ರಂದು ರಾತ್ರಿಯೆ ಕುಡಿದ ಮತ್ತಿನಲ್ಲಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿಗೆ ವಿರುದ್ಧ 22 ವರ್ಷದ ಪತ್ನಿ ನೇರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜುಲೈ 23 ರಂದು ಸಂಜೆ ಬಂದು ಪತಿ ವಿಶ್ವನಾಥ ಎಂಬಾತನ ವಿರುದ್ಧ ದೂರು ನೀಡಿದ್ದಾಳೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪತಿ ವಿಶ್ವನಾಥ ವಿರುದ್ಧ BNS 109,115(1), 85 ,4DP (ಕೊಲೆಯತ್ನ, ಕೈಯಿಂದ ಹಲ್ಲೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಬೇಡಿಕೆ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪತಿ ವಿಶ್ವನಾಥ್ (24) ನನ್ನು ಜುಲೈ 24 ರಂದು ಉಜಿರೆಯಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಸಿಬ್ಬಂದಿಗಳುಬಂಧಿಸಿ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರುಪಡಿಸಿದ್ದು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!