25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

ಬೆಳ್ತಂಗಡಿ: ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲಯತ್ನ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ನೋಟಿಸ್ ಅನ್ನು ಹಿಂಪಡೆದಿದ್ದನ್ನು ಗಮನಿಸಿದಾಗ ಶಾಲಾ ಪಠ್ಯಪುಸ್ತಕದಲ್ಲಿ ಓದಿದ ತುಘಲಕ್ ದರ್ಬಾರ್ ನ್ನು ನೆನಪಿಗೆ ತರುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ಜಿ ಎಸ್ ಟಿ ಕಾಯ್ದೆಯ ಪ್ರಕಾರ ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ ಎಂಬ ಅರಿವಿದ್ದರೂ, ಬೀದಿ ಬದಿಯ ವ್ಯಾಪಾರಿಗಳಿಗೆ ಸಣ್ಣ ವರ್ತಕರಿಗೆ ವಹಿವಾಟು ರೂ. 40 ಲಕ್ಷ ದಾಟಿದೆಂಬ ನೆಪದಲ್ಲಿ ಅವರ ಹೊಟ್ಟೆಗೆ ಹೊಡೆಯಲು ಯತ್ನಿಸಿ, ಶೇಕಡ 18ರಂತೆ ತೆರಿಗೆ, ಬಡ್ಡಿ, ದಂಡ ಇತ್ಯಾದಿಗಳನ್ನು ನಮೂದಿಸಿ ನಿಯಮ ಬಾಹಿರವಾಗಿ ನೋಟಿಸ್ ನೀಡಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ನಿಜ ಬಣ್ಣ ಈಗ ರಾಜ್ಯದ ಜನತೆಯ ಮುಂದೆ ಬಟಾ ಬಯಲಾಗಿದೆ ಎಂದು ಹರೀಶ್ ಪೂಂಜ ಪತ್ರಿಕ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!