September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

ಬೆಳ್ತಂಗಡಿ: ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲಯತ್ನ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ನೋಟಿಸ್ ಅನ್ನು ಹಿಂಪಡೆದಿದ್ದನ್ನು ಗಮನಿಸಿದಾಗ ಶಾಲಾ ಪಠ್ಯಪುಸ್ತಕದಲ್ಲಿ ಓದಿದ ತುಘಲಕ್ ದರ್ಬಾರ್ ನ್ನು ನೆನಪಿಗೆ ತರುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ಜಿ ಎಸ್ ಟಿ ಕಾಯ್ದೆಯ ಪ್ರಕಾರ ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ ಎಂಬ ಅರಿವಿದ್ದರೂ, ಬೀದಿ ಬದಿಯ ವ್ಯಾಪಾರಿಗಳಿಗೆ ಸಣ್ಣ ವರ್ತಕರಿಗೆ ವಹಿವಾಟು ರೂ. 40 ಲಕ್ಷ ದಾಟಿದೆಂಬ ನೆಪದಲ್ಲಿ ಅವರ ಹೊಟ್ಟೆಗೆ ಹೊಡೆಯಲು ಯತ್ನಿಸಿ, ಶೇಕಡ 18ರಂತೆ ತೆರಿಗೆ, ಬಡ್ಡಿ, ದಂಡ ಇತ್ಯಾದಿಗಳನ್ನು ನಮೂದಿಸಿ ನಿಯಮ ಬಾಹಿರವಾಗಿ ನೋಟಿಸ್ ನೀಡಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ನಿಜ ಬಣ್ಣ ಈಗ ರಾಜ್ಯದ ಜನತೆಯ ಮುಂದೆ ಬಟಾ ಬಯಲಾಗಿದೆ ಎಂದು ಹರೀಶ್ ಪೂಂಜ ಪತ್ರಿಕ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya
error: Content is protected !!