ಶಾಲಾ ಕಾಲೇಜು

ಮಂಗಳೂರು :ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜಿನಲ್ಲಿ ಗಣಕ ವಿಜ್ಞಾನ ಶೈಕ್ಷಣಿಕ ಕಾರ್ಯಗಾರ


ಬೆಳ್ತಂಗಡಿ :ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ. ಕ. ಮಂಗಳೂರು ಇದರ ಉಪನಿರ್ದೇಶಕರಾದ ಶ್ರೀಮತಿ ರಾಜೇಶ್ವರಿ ಹೆಚ್. ಹೆಚ್ ಹೇಳಿದರು.


ಅವರು ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ)ಮಂಗಳೂರು ಮತ್ತು ದ. ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಸಂಘ ಹಾಗು ಮಂಗಳೂರು ಬೆಂದೂರು ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಗಣಕ ವಿಜ್ಞಾನ ವಿಷಯದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತ, ಇಂದಿನ ಕಾಲದಲ್ಲಿ ತಂತ್ರಜ್ಞಾನವಿಲ್ಲದೇ ಯಾವುದೇ ಕೆಲಸ ಅಸಾಧ್ಯ. ಮುಂದಿನ ಭವಿಷ್ಯ ತಂತ್ರಜ್ಞಾನದಿಂದಲೇ ಕೂಡಿರುತ್ತದೆ ಎಂದರು.
ಮಂಗಳೂರು ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನೋರಿನ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ದ. ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ ಮುಖ್ಯ ಅಥಿತಿಯಾಗಿದ್ದರು. ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಗುರುದತ್ತ ಪುರುತಗೇರಿ, ಶ್ರೀನಿವಾಸ್ ಎ, ಶ್ರೀಮತಿ ಮಂಗಲಾ ಶೆಣೈ, ಹರೀಶ್ ಆರ್, ಶ್ರೀಮತಿ ಶರಣ್ಯ ಆಳ್ವ, ಪ್ರದೀಪ್ ಕೆ ವೈ ಕಾರ್ಯಗಾರವನ್ನು ನಡೆಸಿಕೊಟ್ಟರು. ಗಣಕ ವಿಜ್ಞಾನ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀಧರ್ ಪುತ್ರನ್, ಉಪಾಧ್ಯಕ್ಷ ಮನೋಜ್ ಪಿ ಎಸ್, ಕೋಶಾಧಿಕಾರಿ ಸುಮಾ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯದರ್ಶಿ ಶ್ರೀಮತಿ ನಿವೇದಿತಾ ವಿ ನಾಯಕ್ ಸ್ವಾಗತಿಸಿ. ತಾಲೂಕು ಪ್ರತಿನಿಧಿ ಶ್ರೀಮತಿ ರಮ್ಯಾ ವಂದಿಸಿ. ಬೆಳ್ತಂಗಡಿ ತಾಲೂಕು ಪ್ರತಿನಿಧಿ ಸುಧೀರ್ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!