September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

ಮಾಲಾಡಿ: ತಾಲೂಕಿನಲ್ಲಿ ಕಳೆದ ಮಳೆಗಾಲದಲ್ಲಿ ಸುರಿದ ಭಾರಿ ಮಳೆಗೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ಮುರಿದು ಬಿದ್ದು ಸಂಪರ್ಕ ಕಡಿತಗೊಂಡಿದ್ದು.

ಈ ಸೇತುವೆಯು ಇಂದಿನವರೆಗೂ ದುರಸ್ತಿ ಆಗಿರುವುದಿಲ್ಲ. ಇದೀಗ 2024 25 ನೇ ಸಾಲಿನಲ್ಲಿ ಲೆ.ಶೀ. 5054 ರಡಿ ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದ ಹಾನಿಗಳಾದ ಗ್ರಾಮೀಣ ರಸ್ತೆ ಸೇತುವೆ ಹಾಗೂ ಚರಂಡಿ ಕಾಮಗಾರಿಯನ್ನು ಕೈಗೊಳ್ಳಲು ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ್ದು ಸರ್ಕಾರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು. ಈ ಅನುದಾನದಲ್ಲಿ ಮೊದಲ ಆದ್ಯತೆಯಲ್ಲಿ ಈ ಸೇತುವೆಯನ್ನು ರಚನೆ ಮಾಡಬೇಕೆಂದು. ಮಾಲಾಡಿ ಸೋಣಂದೂರು ಪಡಂಗಡಿ ಗ್ರಾಮಸ್ಥರು ಇಂದು ಸೇತುವೆ ಕುಸಿದ ಜಾಗದಲ್ಲಿ ಪ್ರತಿಭಟನೆಯನ್ನು ಮಾಡಿದರು.

ಈ ಪ್ರತಿಭಟನೆಯಲ್ಲಿ,ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್, ಸದಸ್ಯರಾದ ಎಸ್ ಬೇಬಿ ಸುವರ್ಣ, ಬೆನಡಿಕ್ಟಾ ಮಿರಾಂದ, ಉಮೇಶ್ ಕೆಡಿಪಿ ಸದಸ್ಯ ಮೇಲ್ವಿನ್ ಸಿಕ್ವೆರಾ ಪಡಂಗಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶರೀಫ್ ಸಬರಬೈಲು, ಪ್ರಮುಖರಾದ ಹೃಷಿಕೇಶ್ ಜೈನ್ ಪಡಂಗಡಿ, ಮಹಮ್ಮದ್ ಅಲಿ ಕೋಲ್ಪೆದಬೈಲು ಮ್ಯಾಕ್ಸಿಮ್ ಸಿಕ್ವೆರಾ ಪಡಂಗಡಿ ಪ್ರಕಾಶ್ ಶೆಟ್ಟಿ, ಗೋಪಣ್ಣ ಪೂಜಾರಿ, ಬ್ಯಾಪಿಸ್ಟ್ ಕರ್ನಾಲಿಯೋ, ಶಬ್ಬೀರ್ ಕನ್ನಡಿಕಟ್ಟೆ, ಬಾಜಿಲ್ ಫೆರ್ನಾಂಡಿಸ್, ಉದಯ್ ಶೆಟ್ಟಿ ಜೆ.ಎಮ್ ಶಂಕರ್ ಮಾಲಾಡಿ, ಅಲ್ತಾಫ್ ಕೋಲ್ಪೆದಬೈಲು, ಅಹ್ಮದ್ ಪೊಮ್ಮಜೆ, ಆದಂ ಬ್ಯಾರಿ ಮೊದಲೆ, ಅಬ್ದುಲ್ ರಹಿಮಾನ್ ಮೊಧಲೆ, ಗೋಪಾಲ್ ಕೋಟ್ಯಾನ್,ಥೋಮಸ್ ಕರ್ನಾಲಿಯೋ, ಇಬ್ರಾಹಿಂ ಪಡಂಗಡಿ ಹಾಗೂ ಮಾಲಾಡಿ ಸೋಣಾಂದೂರು ಮತ್ತು ಪಡಂಗಡಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!