23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

ಬೆಳ್ತಂಗಡಿ: ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲಯತ್ನ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ನೋಟಿಸ್ ಅನ್ನು ಹಿಂಪಡೆದಿದ್ದನ್ನು ಗಮನಿಸಿದಾಗ ಶಾಲಾ ಪಠ್ಯಪುಸ್ತಕದಲ್ಲಿ ಓದಿದ ತುಘಲಕ್ ದರ್ಬಾರ್ ನ್ನು ನೆನಪಿಗೆ ತರುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ಜಿ ಎಸ್ ಟಿ ಕಾಯ್ದೆಯ ಪ್ರಕಾರ ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ ಎಂಬ ಅರಿವಿದ್ದರೂ, ಬೀದಿ ಬದಿಯ ವ್ಯಾಪಾರಿಗಳಿಗೆ ಸಣ್ಣ ವರ್ತಕರಿಗೆ ವಹಿವಾಟು ರೂ. 40 ಲಕ್ಷ ದಾಟಿದೆಂಬ ನೆಪದಲ್ಲಿ ಅವರ ಹೊಟ್ಟೆಗೆ ಹೊಡೆಯಲು ಯತ್ನಿಸಿ, ಶೇಕಡ 18ರಂತೆ ತೆರಿಗೆ, ಬಡ್ಡಿ, ದಂಡ ಇತ್ಯಾದಿಗಳನ್ನು ನಮೂದಿಸಿ ನಿಯಮ ಬಾಹಿರವಾಗಿ ನೋಟಿಸ್ ನೀಡಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ನಿಜ ಬಣ್ಣ ಈಗ ರಾಜ್ಯದ ಜನತೆಯ ಮುಂದೆ ಬಟಾ ಬಯಲಾಗಿದೆ ಎಂದು ಹರೀಶ್ ಪೂಂಜ ಪತ್ರಿಕ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya
error: Content is protected !!