September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

ಬೆಳ್ತಂಗಡಿ: ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲಯತ್ನ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ನೋಟಿಸ್ ಅನ್ನು ಹಿಂಪಡೆದಿದ್ದನ್ನು ಗಮನಿಸಿದಾಗ ಶಾಲಾ ಪಠ್ಯಪುಸ್ತಕದಲ್ಲಿ ಓದಿದ ತುಘಲಕ್ ದರ್ಬಾರ್ ನ್ನು ನೆನಪಿಗೆ ತರುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ಜಿ ಎಸ್ ಟಿ ಕಾಯ್ದೆಯ ಪ್ರಕಾರ ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ ಎಂಬ ಅರಿವಿದ್ದರೂ, ಬೀದಿ ಬದಿಯ ವ್ಯಾಪಾರಿಗಳಿಗೆ ಸಣ್ಣ ವರ್ತಕರಿಗೆ ವಹಿವಾಟು ರೂ. 40 ಲಕ್ಷ ದಾಟಿದೆಂಬ ನೆಪದಲ್ಲಿ ಅವರ ಹೊಟ್ಟೆಗೆ ಹೊಡೆಯಲು ಯತ್ನಿಸಿ, ಶೇಕಡ 18ರಂತೆ ತೆರಿಗೆ, ಬಡ್ಡಿ, ದಂಡ ಇತ್ಯಾದಿಗಳನ್ನು ನಮೂದಿಸಿ ನಿಯಮ ಬಾಹಿರವಾಗಿ ನೋಟಿಸ್ ನೀಡಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ನಿಜ ಬಣ್ಣ ಈಗ ರಾಜ್ಯದ ಜನತೆಯ ಮುಂದೆ ಬಟಾ ಬಯಲಾಗಿದೆ ಎಂದು ಹರೀಶ್ ಪೂಂಜ ಪತ್ರಿಕ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಪಿಲಿಗೂಡು ಬಳಿ ಕಂದಕಕ್ಕೆ ಜಾರಿದ ಲಾರಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಋಷಿ ಬಿ . ಶೆಟ್ಟಿ ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya
error: Content is protected !!