July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

ಮಾಲಾಡಿ: ತಾಲೂಕಿನಲ್ಲಿ ಕಳೆದ ಮಳೆಗಾಲದಲ್ಲಿ ಸುರಿದ ಭಾರಿ ಮಳೆಗೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ಮುರಿದು ಬಿದ್ದು ಸಂಪರ್ಕ ಕಡಿತಗೊಂಡಿದ್ದು.

ಈ ಸೇತುವೆಯು ಇಂದಿನವರೆಗೂ ದುರಸ್ತಿ ಆಗಿರುವುದಿಲ್ಲ. ಇದೀಗ 2024 25 ನೇ ಸಾಲಿನಲ್ಲಿ ಲೆ.ಶೀ. 5054 ರಡಿ ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದ ಹಾನಿಗಳಾದ ಗ್ರಾಮೀಣ ರಸ್ತೆ ಸೇತುವೆ ಹಾಗೂ ಚರಂಡಿ ಕಾಮಗಾರಿಯನ್ನು ಕೈಗೊಳ್ಳಲು ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ್ದು ಸರ್ಕಾರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು. ಈ ಅನುದಾನದಲ್ಲಿ ಮೊದಲ ಆದ್ಯತೆಯಲ್ಲಿ ಈ ಸೇತುವೆಯನ್ನು ರಚನೆ ಮಾಡಬೇಕೆಂದು. ಮಾಲಾಡಿ ಸೋಣಂದೂರು ಪಡಂಗಡಿ ಗ್ರಾಮಸ್ಥರು ಇಂದು ಸೇತುವೆ ಕುಸಿದ ಜಾಗದಲ್ಲಿ ಪ್ರತಿಭಟನೆಯನ್ನು ಮಾಡಿದರು.

ಈ ಪ್ರತಿಭಟನೆಯಲ್ಲಿ,ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್, ಸದಸ್ಯರಾದ ಎಸ್ ಬೇಬಿ ಸುವರ್ಣ, ಬೆನಡಿಕ್ಟಾ ಮಿರಾಂದ, ಉಮೇಶ್ ಕೆಡಿಪಿ ಸದಸ್ಯ ಮೇಲ್ವಿನ್ ಸಿಕ್ವೆರಾ ಪಡಂಗಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶರೀಫ್ ಸಬರಬೈಲು, ಪ್ರಮುಖರಾದ ಹೃಷಿಕೇಶ್ ಜೈನ್ ಪಡಂಗಡಿ, ಮಹಮ್ಮದ್ ಅಲಿ ಕೋಲ್ಪೆದಬೈಲು ಮ್ಯಾಕ್ಸಿಮ್ ಸಿಕ್ವೆರಾ ಪಡಂಗಡಿ ಪ್ರಕಾಶ್ ಶೆಟ್ಟಿ, ಗೋಪಣ್ಣ ಪೂಜಾರಿ, ಬ್ಯಾಪಿಸ್ಟ್ ಕರ್ನಾಲಿಯೋ, ಶಬ್ಬೀರ್ ಕನ್ನಡಿಕಟ್ಟೆ, ಬಾಜಿಲ್ ಫೆರ್ನಾಂಡಿಸ್, ಉದಯ್ ಶೆಟ್ಟಿ ಜೆ.ಎಮ್ ಶಂಕರ್ ಮಾಲಾಡಿ, ಅಲ್ತಾಫ್ ಕೋಲ್ಪೆದಬೈಲು, ಅಹ್ಮದ್ ಪೊಮ್ಮಜೆ, ಆದಂ ಬ್ಯಾರಿ ಮೊದಲೆ, ಅಬ್ದುಲ್ ರಹಿಮಾನ್ ಮೊಧಲೆ, ಗೋಪಾಲ್ ಕೋಟ್ಯಾನ್,ಥೋಮಸ್ ಕರ್ನಾಲಿಯೋ, ಇಬ್ರಾಹಿಂ ಪಡಂಗಡಿ ಹಾಗೂ ಮಾಲಾಡಿ ಸೋಣಾಂದೂರು ಮತ್ತು ಪಡಂಗಡಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya
error: Content is protected !!