September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಉಜಿರೆ: ಎಸ್ ಡಿ ಎಮ್ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಬಸವಶ್ರೀ ಪಾಟೀಲ್ ತರಬೇತುದಾರರು, ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಆಧುನಿಕ ಪಿ ಎಲ್ ಸಿ ನಿಯಂತ್ರಕಗಳೊಂದಿಗಿನ ಸಂವಹನ ಮತ್ತು ಉದ್ಯಮ 4.0 ಮೇಲೆ ಅದರ ಪರಿಣಾಮದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿದರು. ಮಾಡರ್ನ್ ಪಿ ಎಲ್ ಸಿ ಯನ್ನು ಕೈಗಾರಿಕಾ ಯಾಂತ್ರೀಕರಣದಲ್ಲಿ ಹೇಗೆ ಬಳಸಲಾಗುತ್ತದೆ ಮತ್ತು ಅವು ಕೈಗಾರಿಕಾ ಅಭಿವೃದ್ಧಿ 4.0 ಯಲ್ಲಿ ಹೇಗೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿಕೊಟ್ಟರು.

ವಿಘ್ನೇಶ್ ವಿ ಕಿಣಿ ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಸಂವೇದಕಗಳು ಮತ್ತು ಆಕ್ಯೂವೇಟರ್ ಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಸಂವೇದಕಗಳು ಮತ್ತು ಆಕ್ಯೂವೇಟರ್ ಗಳ ಮೂಲಗಳು, ಅವುಗಳ ಪ್ರಕಾರಗಳು, ಕಾರ್ಯಗಳು ಮತ್ತು ಆಟೋಮೇಷನ್ ಮತ್ತು ರೋಬೋಟಿಕ್ಸ್ ನಂತಹ ಕ್ಷೇತ್ರಗಳಲ್ಲಿ ನೈಜ ಪ್ರಪಂಚದ ಅನ್ವಯಿಕೆಗಳ ಬಗ್ಗೆ ತಿಳಿಸಿಕೊಟ್ಟರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಅಮರೇಶ್ ಹೆಬ್ಬಾರ್ ಮತ್ತು ಶಾದ್ವಲ ಸೆಬಾಸ್ಟಿಯನ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಶಿವರಾಜ್ ಪಿ ಮತ್ತು ಸಾಯಿ ಚರಣ್ ಉಪಸ್ಥಿತರಿದ್ದರು.

Related posts

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya
error: Content is protected !!