30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ’ಗೆ ಹೋಗುವ ರಸ್ತೆಯು ಸುಮಾರು 3-4 ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇಷ್ಟರವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಈ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಸ್ತುತ ಈ ರಸ್ತೆಯಲ್ಲಿ ಪ್ರಯಾಣಿಸಲು ತುಂಬಾ ಕಷ್ಟದಾಯಕವಾಗಿದೆ. ಮಳೆಗಾಲದಲ್ಲಿ ಜನರು ಬಹಳಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ರಸ್ತೆ ಹಲವಾರು ವಿದ್ಯಾರ್ಥಿಗಳು, ದಿನ ಕೂಲಿ-ಕಾರ್ಮಿಕರು ನಿತ್ಯ ಸಂಚರಿಸುವ ರಸ್ತೆಯಾಗಿರುತ್ತದೆ. ಜೊತೆಗೆ ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಕಾಲನಿಗೆ ಹಾದು ಹೋಗುವ ರಸ್ತೆಯಾಗಿದೆ.
ಆದಷ್ಟು ಶೀಘ್ರವಾಗಿ ಈ ರಸ್ತೆಯನ್ನು ಕಾಂಕ್ರಿಟೀಕರಣಗೊಳಸಿ ಅಭಿವೃದ್ಧಿ ರಸ್ತೆಯನ್ನಾಗಿ ಮಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಚಾರ್ಮಾಡಿ ಅಭಿವೃದ್ಧಿ ಅಧಿಕಾರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ, ಉಜಿರೆ ಬ್ಲಾಕ್ ಸಮಿತಿ ಸದಸ್ಯರು ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya
error: Content is protected !!