July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ’ಗೆ ಹೋಗುವ ರಸ್ತೆಯು ಸುಮಾರು 3-4 ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇಷ್ಟರವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಈ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಸ್ತುತ ಈ ರಸ್ತೆಯಲ್ಲಿ ಪ್ರಯಾಣಿಸಲು ತುಂಬಾ ಕಷ್ಟದಾಯಕವಾಗಿದೆ. ಮಳೆಗಾಲದಲ್ಲಿ ಜನರು ಬಹಳಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ರಸ್ತೆ ಹಲವಾರು ವಿದ್ಯಾರ್ಥಿಗಳು, ದಿನ ಕೂಲಿ-ಕಾರ್ಮಿಕರು ನಿತ್ಯ ಸಂಚರಿಸುವ ರಸ್ತೆಯಾಗಿರುತ್ತದೆ. ಜೊತೆಗೆ ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಕಾಲನಿಗೆ ಹಾದು ಹೋಗುವ ರಸ್ತೆಯಾಗಿದೆ.
ಆದಷ್ಟು ಶೀಘ್ರವಾಗಿ ಈ ರಸ್ತೆಯನ್ನು ಕಾಂಕ್ರಿಟೀಕರಣಗೊಳಸಿ ಅಭಿವೃದ್ಧಿ ರಸ್ತೆಯನ್ನಾಗಿ ಮಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಚಾರ್ಮಾಡಿ ಅಭಿವೃದ್ಧಿ ಅಧಿಕಾರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ, ಉಜಿರೆ ಬ್ಲಾಕ್ ಸಮಿತಿ ಸದಸ್ಯರು ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya
error: Content is protected !!