July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಜು. 25 ರಂದು ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ’ಅತ್ ಖತೀಬರಾದ ಹನೀಫ್ ಫೈಝಿಯವರು ದುವಾ ಮೂಲಕ ನಡೆಯಿತು.

ಪ್ರಧಾನ ಕಾರ್ಯದರ್ಶಿ ರಝಾಕ್ ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಅಧ್ಯಕ್ಷ ಬಿ ಎ ನಝೀರ್ ರವರು ಕಳೆದ ಸಾಲಿನ ಅವಧಿಯಲ್ಲಿ ನಡೆದ ಮಸೀದಿಯ ಅಭಿವೃದ್ಧಿ ಕಾರ್ಯವನ್ನು ವಿವರಿಸಿದರು. ಮಹಮ್ಮದ್ ಬಿ ಎಚ್ ಗೌರವ ಅಧ್ಯಕ್ಷತೆಯಲ್ಲಿ ಹಳೆಯ ಸಮಿತಿಯನ್ನು ಬರ್ಕಾಸುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ರಝಾಕ್ ಕೊಡಿಸಭೆ, ಉಪಾಧ್ಯಕ್ಷರಾಗಿ ಬಿ.ಶೇಕುಂಞ, ಬದ್ರುದ್ದಿನ್ ಮಟ್ಲ, ಜೊತೆ ಕಾರ್ಯದರ್ಶಿಗಳಾಗಿ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಯಾಗಿ ಫೈಝಲ್ ಐ.ಜೆ ಆಯ್ಕೆಯಾದರು.

ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ ಎಚ್ ಮಹಮ್ಮದ್, ಗೌರವ ಸಲಹೆಗಾರರಾಗಿ ನಝೀರ್ ಬಿ. ಎ ರವರು ಆಯ್ಕೆಯಾದರು . ಈ ಸಂದರ್ಭದಲ್ಲಿ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಸಭೆಯನ್ನು ಕಾರ್ಯದರ್ಶಿ ರಝಾಕ್ ಕೊಡಿಸಭೆ ಸ್ವಾಗತಿಸಿ, ಯಾಕೂಬ್ ಮಾಸ್ಟರ್ ನಿರೂಪಿಸಿದರು.

Related posts

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya
error: Content is protected !!