22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಉಜಿರೆ: ಎಸ್ ಡಿ ಎಮ್ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಬಸವಶ್ರೀ ಪಾಟೀಲ್ ತರಬೇತುದಾರರು, ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಆಧುನಿಕ ಪಿ ಎಲ್ ಸಿ ನಿಯಂತ್ರಕಗಳೊಂದಿಗಿನ ಸಂವಹನ ಮತ್ತು ಉದ್ಯಮ 4.0 ಮೇಲೆ ಅದರ ಪರಿಣಾಮದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿದರು. ಮಾಡರ್ನ್ ಪಿ ಎಲ್ ಸಿ ಯನ್ನು ಕೈಗಾರಿಕಾ ಯಾಂತ್ರೀಕರಣದಲ್ಲಿ ಹೇಗೆ ಬಳಸಲಾಗುತ್ತದೆ ಮತ್ತು ಅವು ಕೈಗಾರಿಕಾ ಅಭಿವೃದ್ಧಿ 4.0 ಯಲ್ಲಿ ಹೇಗೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿಕೊಟ್ಟರು.

ವಿಘ್ನೇಶ್ ವಿ ಕಿಣಿ ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಸಂವೇದಕಗಳು ಮತ್ತು ಆಕ್ಯೂವೇಟರ್ ಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಸಂವೇದಕಗಳು ಮತ್ತು ಆಕ್ಯೂವೇಟರ್ ಗಳ ಮೂಲಗಳು, ಅವುಗಳ ಪ್ರಕಾರಗಳು, ಕಾರ್ಯಗಳು ಮತ್ತು ಆಟೋಮೇಷನ್ ಮತ್ತು ರೋಬೋಟಿಕ್ಸ್ ನಂತಹ ಕ್ಷೇತ್ರಗಳಲ್ಲಿ ನೈಜ ಪ್ರಪಂಚದ ಅನ್ವಯಿಕೆಗಳ ಬಗ್ಗೆ ತಿಳಿಸಿಕೊಟ್ಟರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಅಮರೇಶ್ ಹೆಬ್ಬಾರ್ ಮತ್ತು ಶಾದ್ವಲ ಸೆಬಾಸ್ಟಿಯನ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಶಿವರಾಜ್ ಪಿ ಮತ್ತು ಸಾಯಿ ಚರಣ್ ಉಪಸ್ಥಿತರಿದ್ದರು.

Related posts

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!