September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಉಜಿರೆ: ಎಸ್ ಡಿ ಎಮ್ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಬಸವಶ್ರೀ ಪಾಟೀಲ್ ತರಬೇತುದಾರರು, ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಆಧುನಿಕ ಪಿ ಎಲ್ ಸಿ ನಿಯಂತ್ರಕಗಳೊಂದಿಗಿನ ಸಂವಹನ ಮತ್ತು ಉದ್ಯಮ 4.0 ಮೇಲೆ ಅದರ ಪರಿಣಾಮದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿದರು. ಮಾಡರ್ನ್ ಪಿ ಎಲ್ ಸಿ ಯನ್ನು ಕೈಗಾರಿಕಾ ಯಾಂತ್ರೀಕರಣದಲ್ಲಿ ಹೇಗೆ ಬಳಸಲಾಗುತ್ತದೆ ಮತ್ತು ಅವು ಕೈಗಾರಿಕಾ ಅಭಿವೃದ್ಧಿ 4.0 ಯಲ್ಲಿ ಹೇಗೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿಕೊಟ್ಟರು.

ವಿಘ್ನೇಶ್ ವಿ ಕಿಣಿ ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಸಂವೇದಕಗಳು ಮತ್ತು ಆಕ್ಯೂವೇಟರ್ ಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಸಂವೇದಕಗಳು ಮತ್ತು ಆಕ್ಯೂವೇಟರ್ ಗಳ ಮೂಲಗಳು, ಅವುಗಳ ಪ್ರಕಾರಗಳು, ಕಾರ್ಯಗಳು ಮತ್ತು ಆಟೋಮೇಷನ್ ಮತ್ತು ರೋಬೋಟಿಕ್ಸ್ ನಂತಹ ಕ್ಷೇತ್ರಗಳಲ್ಲಿ ನೈಜ ಪ್ರಪಂಚದ ಅನ್ವಯಿಕೆಗಳ ಬಗ್ಗೆ ತಿಳಿಸಿಕೊಟ್ಟರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಅಮರೇಶ್ ಹೆಬ್ಬಾರ್ ಮತ್ತು ಶಾದ್ವಲ ಸೆಬಾಸ್ಟಿಯನ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಶಿವರಾಜ್ ಪಿ ಮತ್ತು ಸಾಯಿ ಚರಣ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!