23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಉಜಿರೆ: ಎಸ್ ಡಿ ಎಮ್ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಬಸವಶ್ರೀ ಪಾಟೀಲ್ ತರಬೇತುದಾರರು, ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಆಧುನಿಕ ಪಿ ಎಲ್ ಸಿ ನಿಯಂತ್ರಕಗಳೊಂದಿಗಿನ ಸಂವಹನ ಮತ್ತು ಉದ್ಯಮ 4.0 ಮೇಲೆ ಅದರ ಪರಿಣಾಮದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿದರು. ಮಾಡರ್ನ್ ಪಿ ಎಲ್ ಸಿ ಯನ್ನು ಕೈಗಾರಿಕಾ ಯಾಂತ್ರೀಕರಣದಲ್ಲಿ ಹೇಗೆ ಬಳಸಲಾಗುತ್ತದೆ ಮತ್ತು ಅವು ಕೈಗಾರಿಕಾ ಅಭಿವೃದ್ಧಿ 4.0 ಯಲ್ಲಿ ಹೇಗೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿಕೊಟ್ಟರು.

ವಿಘ್ನೇಶ್ ವಿ ಕಿಣಿ ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಸಂವೇದಕಗಳು ಮತ್ತು ಆಕ್ಯೂವೇಟರ್ ಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಸಂವೇದಕಗಳು ಮತ್ತು ಆಕ್ಯೂವೇಟರ್ ಗಳ ಮೂಲಗಳು, ಅವುಗಳ ಪ್ರಕಾರಗಳು, ಕಾರ್ಯಗಳು ಮತ್ತು ಆಟೋಮೇಷನ್ ಮತ್ತು ರೋಬೋಟಿಕ್ಸ್ ನಂತಹ ಕ್ಷೇತ್ರಗಳಲ್ಲಿ ನೈಜ ಪ್ರಪಂಚದ ಅನ್ವಯಿಕೆಗಳ ಬಗ್ಗೆ ತಿಳಿಸಿಕೊಟ್ಟರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಅಮರೇಶ್ ಹೆಬ್ಬಾರ್ ಮತ್ತು ಶಾದ್ವಲ ಸೆಬಾಸ್ಟಿಯನ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಶಿವರಾಜ್ ಪಿ ಮತ್ತು ಸಾಯಿ ಚರಣ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!