22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ’ಗೆ ಹೋಗುವ ರಸ್ತೆಯು ಸುಮಾರು 3-4 ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇಷ್ಟರವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಈ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಸ್ತುತ ಈ ರಸ್ತೆಯಲ್ಲಿ ಪ್ರಯಾಣಿಸಲು ತುಂಬಾ ಕಷ್ಟದಾಯಕವಾಗಿದೆ. ಮಳೆಗಾಲದಲ್ಲಿ ಜನರು ಬಹಳಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ರಸ್ತೆ ಹಲವಾರು ವಿದ್ಯಾರ್ಥಿಗಳು, ದಿನ ಕೂಲಿ-ಕಾರ್ಮಿಕರು ನಿತ್ಯ ಸಂಚರಿಸುವ ರಸ್ತೆಯಾಗಿರುತ್ತದೆ. ಜೊತೆಗೆ ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಕಾಲನಿಗೆ ಹಾದು ಹೋಗುವ ರಸ್ತೆಯಾಗಿದೆ.
ಆದಷ್ಟು ಶೀಘ್ರವಾಗಿ ಈ ರಸ್ತೆಯನ್ನು ಕಾಂಕ್ರಿಟೀಕರಣಗೊಳಸಿ ಅಭಿವೃದ್ಧಿ ರಸ್ತೆಯನ್ನಾಗಿ ಮಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಚಾರ್ಮಾಡಿ ಅಭಿವೃದ್ಧಿ ಅಧಿಕಾರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ, ಉಜಿರೆ ಬ್ಲಾಕ್ ಸಮಿತಿ ಸದಸ್ಯರು ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!