22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಜು. 25 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿ ಮಾತನಾಡಿ ರೂ. 2,26,96,647 (2.26 ಕೋಟಿ ) ವ್ಯವಹಾರ ಮಾಡಿ 547018 (5.47 ಲಕ್ಷ ) ಲಾಭಗಳಿಸಿದೆ ಎಂದರು.


ವಾರ್ಷಿಕ ವರದಿಯನ್ನು ಸಿಬ್ಬಂದಿ ನಿತಿನ್ ಕುಮಾರ್ ಮತ್ತು ಲೆಕ್ಕ ಪತ್ರ ವನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಶೆಟ್ಟಿ ಸಭೆಗೆ ಮಂಡಿಸಿದರು.


ಈ ವೇಳೆ 2024 -25 ನೇ ಸಾಲಿನಲ್ಲಿ ಅತಿ ಹೆಚ್ಚು ವ್ಯವಹಾರ ಮಾಡಿದ ಹತ್ತು ಜನ ಸಂಸ್ಥೆಯ ಸದಸ್ಯರನ್ನು ಮತ್ತು ಸದಸ್ಯರೇತರ 5 ಮಂದಿಯನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಜೋರೋಮ್ ಬ್ರಗ್ಸ್, ವಾಸಪ್ಪ ಗೌಡ., ಮೋನಪ್ಪ ಗೌಡ, ಯೋಗೀಶ್ ಪೂಜಾರಿ, ಸುಬ್ರಹ್ಮಣ್ಯ ರಾವ್, ಮಂಜುನಾಥ್ ಸಾಲಿಯಾನ್, ದಯಾನಂದ. ಪಿ. ಮತ್ತು ಸದಸ್ಯರು ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಉಪಾಧ್ಯಕ್ಷ ಪುರಂದರ ಗೌಡ ಎನ್‌. ಸ್ವಾಗತಿಸಿದರು. ನಿರ್ದೇಶಕರಾದ ತಿಮ್ಮಪ್ಪ ಗೌಡ ಧನ್ಯವಾದ ವಿತ್ತರು

Related posts

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya
error: Content is protected !!