September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಜು. 25 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿ ಮಾತನಾಡಿ ರೂ. 2,26,96,647 (2.26 ಕೋಟಿ ) ವ್ಯವಹಾರ ಮಾಡಿ 547018 (5.47 ಲಕ್ಷ ) ಲಾಭಗಳಿಸಿದೆ ಎಂದರು.


ವಾರ್ಷಿಕ ವರದಿಯನ್ನು ಸಿಬ್ಬಂದಿ ನಿತಿನ್ ಕುಮಾರ್ ಮತ್ತು ಲೆಕ್ಕ ಪತ್ರ ವನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಶೆಟ್ಟಿ ಸಭೆಗೆ ಮಂಡಿಸಿದರು.


ಈ ವೇಳೆ 2024 -25 ನೇ ಸಾಲಿನಲ್ಲಿ ಅತಿ ಹೆಚ್ಚು ವ್ಯವಹಾರ ಮಾಡಿದ ಹತ್ತು ಜನ ಸಂಸ್ಥೆಯ ಸದಸ್ಯರನ್ನು ಮತ್ತು ಸದಸ್ಯರೇತರ 5 ಮಂದಿಯನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಜೋರೋಮ್ ಬ್ರಗ್ಸ್, ವಾಸಪ್ಪ ಗೌಡ., ಮೋನಪ್ಪ ಗೌಡ, ಯೋಗೀಶ್ ಪೂಜಾರಿ, ಸುಬ್ರಹ್ಮಣ್ಯ ರಾವ್, ಮಂಜುನಾಥ್ ಸಾಲಿಯಾನ್, ದಯಾನಂದ. ಪಿ. ಮತ್ತು ಸದಸ್ಯರು ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಉಪಾಧ್ಯಕ್ಷ ಪುರಂದರ ಗೌಡ ಎನ್‌. ಸ್ವಾಗತಿಸಿದರು. ನಿರ್ದೇಶಕರಾದ ತಿಮ್ಮಪ್ಪ ಗೌಡ ಧನ್ಯವಾದ ವಿತ್ತರು

Related posts

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಮಹಾಸಭೆ: ಆಡಳಿತ ಮಂಡಳಿಗೆ ಮತದಾನ; 11 ಮಂದಿ ನಿರ್ದೇಶಕರ ಆಯ್ಕೆ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಬಂಗಾಡಿಯ ವಸಂತ ಗೌಡರವರ ಚಿಕಿತ್ಸೆಗೆ ನೆರವಾಗಿ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya
error: Content is protected !!