
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಬಳಿ ಜುಲೈ 25 ರಂದು ಎಸ್.ಐ.ಟಿ ಕಚೇರಿ ಆರಂಭವಾಗಲಿದೆ ಎಂದು ವರದಿಯಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಪೊಲೀಸ್ ಇಲಾಖೆಗೆ ಸೇರಿದ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಓಪನ್ ಆಗಲಿದೆ. ಹೊಸ ಕಟ್ಟಡದ ನೆಲ ಮಹಡಿಯ ಎರಡು ಕೋಣೆಗಳನ್ನು ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣದ ತನಿಖೆಗಾಗಿ ಕಚೇರಿ ತೆರೆಯಲಿದ್ದಾರೆ ಎಂದು ತಿಳಿದು ಬಂದಿದೆ.











