25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಜು. 25 ರಂದು ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ’ಅತ್ ಖತೀಬರಾದ ಹನೀಫ್ ಫೈಝಿಯವರು ದುವಾ ಮೂಲಕ ನಡೆಯಿತು.

ಪ್ರಧಾನ ಕಾರ್ಯದರ್ಶಿ ರಝಾಕ್ ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಅಧ್ಯಕ್ಷ ಬಿ ಎ ನಝೀರ್ ರವರು ಕಳೆದ ಸಾಲಿನ ಅವಧಿಯಲ್ಲಿ ನಡೆದ ಮಸೀದಿಯ ಅಭಿವೃದ್ಧಿ ಕಾರ್ಯವನ್ನು ವಿವರಿಸಿದರು. ಮಹಮ್ಮದ್ ಬಿ ಎಚ್ ಗೌರವ ಅಧ್ಯಕ್ಷತೆಯಲ್ಲಿ ಹಳೆಯ ಸಮಿತಿಯನ್ನು ಬರ್ಕಾಸುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ರಝಾಕ್ ಕೊಡಿಸಭೆ, ಉಪಾಧ್ಯಕ್ಷರಾಗಿ ಬಿ.ಶೇಕುಂಞ, ಬದ್ರುದ್ದಿನ್ ಮಟ್ಲ, ಜೊತೆ ಕಾರ್ಯದರ್ಶಿಗಳಾಗಿ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಯಾಗಿ ಫೈಝಲ್ ಐ.ಜೆ ಆಯ್ಕೆಯಾದರು.

ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ ಎಚ್ ಮಹಮ್ಮದ್, ಗೌರವ ಸಲಹೆಗಾರರಾಗಿ ನಝೀರ್ ಬಿ. ಎ ರವರು ಆಯ್ಕೆಯಾದರು . ಈ ಸಂದರ್ಭದಲ್ಲಿ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಸಭೆಯನ್ನು ಕಾರ್ಯದರ್ಶಿ ರಝಾಕ್ ಕೊಡಿಸಭೆ ಸ್ವಾಗತಿಸಿ, ಯಾಕೂಬ್ ಮಾಸ್ಟರ್ ನಿರೂಪಿಸಿದರು.

Related posts

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!