23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಉಜಿರೆ: ಎಸ್ ಡಿ ಎಮ್ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಬಸವಶ್ರೀ ಪಾಟೀಲ್ ತರಬೇತುದಾರರು, ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಆಧುನಿಕ ಪಿ ಎಲ್ ಸಿ ನಿಯಂತ್ರಕಗಳೊಂದಿಗಿನ ಸಂವಹನ ಮತ್ತು ಉದ್ಯಮ 4.0 ಮೇಲೆ ಅದರ ಪರಿಣಾಮದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿದರು. ಮಾಡರ್ನ್ ಪಿ ಎಲ್ ಸಿ ಯನ್ನು ಕೈಗಾರಿಕಾ ಯಾಂತ್ರೀಕರಣದಲ್ಲಿ ಹೇಗೆ ಬಳಸಲಾಗುತ್ತದೆ ಮತ್ತು ಅವು ಕೈಗಾರಿಕಾ ಅಭಿವೃದ್ಧಿ 4.0 ಯಲ್ಲಿ ಹೇಗೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿಕೊಟ್ಟರು.

ವಿಘ್ನೇಶ್ ವಿ ಕಿಣಿ ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಸಂವೇದಕಗಳು ಮತ್ತು ಆಕ್ಯೂವೇಟರ್ ಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಸಂವೇದಕಗಳು ಮತ್ತು ಆಕ್ಯೂವೇಟರ್ ಗಳ ಮೂಲಗಳು, ಅವುಗಳ ಪ್ರಕಾರಗಳು, ಕಾರ್ಯಗಳು ಮತ್ತು ಆಟೋಮೇಷನ್ ಮತ್ತು ರೋಬೋಟಿಕ್ಸ್ ನಂತಹ ಕ್ಷೇತ್ರಗಳಲ್ಲಿ ನೈಜ ಪ್ರಪಂಚದ ಅನ್ವಯಿಕೆಗಳ ಬಗ್ಗೆ ತಿಳಿಸಿಕೊಟ್ಟರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಅಮರೇಶ್ ಹೆಬ್ಬಾರ್ ಮತ್ತು ಶಾದ್ವಲ ಸೆಬಾಸ್ಟಿಯನ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಶಿವರಾಜ್ ಪಿ ಮತ್ತು ಸಾಯಿ ಚರಣ್ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!