25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಉಜಿರೆ: ಎಸ್ ಡಿ ಎಮ್ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಬಸವಶ್ರೀ ಪಾಟೀಲ್ ತರಬೇತುದಾರರು, ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಆಧುನಿಕ ಪಿ ಎಲ್ ಸಿ ನಿಯಂತ್ರಕಗಳೊಂದಿಗಿನ ಸಂವಹನ ಮತ್ತು ಉದ್ಯಮ 4.0 ಮೇಲೆ ಅದರ ಪರಿಣಾಮದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿದರು. ಮಾಡರ್ನ್ ಪಿ ಎಲ್ ಸಿ ಯನ್ನು ಕೈಗಾರಿಕಾ ಯಾಂತ್ರೀಕರಣದಲ್ಲಿ ಹೇಗೆ ಬಳಸಲಾಗುತ್ತದೆ ಮತ್ತು ಅವು ಕೈಗಾರಿಕಾ ಅಭಿವೃದ್ಧಿ 4.0 ಯಲ್ಲಿ ಹೇಗೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿಕೊಟ್ಟರು.

ವಿಘ್ನೇಶ್ ವಿ ಕಿಣಿ ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಸಂವೇದಕಗಳು ಮತ್ತು ಆಕ್ಯೂವೇಟರ್ ಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಸಂವೇದಕಗಳು ಮತ್ತು ಆಕ್ಯೂವೇಟರ್ ಗಳ ಮೂಲಗಳು, ಅವುಗಳ ಪ್ರಕಾರಗಳು, ಕಾರ್ಯಗಳು ಮತ್ತು ಆಟೋಮೇಷನ್ ಮತ್ತು ರೋಬೋಟಿಕ್ಸ್ ನಂತಹ ಕ್ಷೇತ್ರಗಳಲ್ಲಿ ನೈಜ ಪ್ರಪಂಚದ ಅನ್ವಯಿಕೆಗಳ ಬಗ್ಗೆ ತಿಳಿಸಿಕೊಟ್ಟರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಅಮರೇಶ್ ಹೆಬ್ಬಾರ್ ಮತ್ತು ಶಾದ್ವಲ ಸೆಬಾಸ್ಟಿಯನ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಶಿವರಾಜ್ ಪಿ ಮತ್ತು ಸಾಯಿ ಚರಣ್ ಉಪಸ್ಥಿತರಿದ್ದರು.

Related posts

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya
error: Content is protected !!