September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಉಜಿರೆ: ಎಸ್ ಡಿ ಎಮ್ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಬಸವಶ್ರೀ ಪಾಟೀಲ್ ತರಬೇತುದಾರರು, ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಆಧುನಿಕ ಪಿ ಎಲ್ ಸಿ ನಿಯಂತ್ರಕಗಳೊಂದಿಗಿನ ಸಂವಹನ ಮತ್ತು ಉದ್ಯಮ 4.0 ಮೇಲೆ ಅದರ ಪರಿಣಾಮದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿದರು. ಮಾಡರ್ನ್ ಪಿ ಎಲ್ ಸಿ ಯನ್ನು ಕೈಗಾರಿಕಾ ಯಾಂತ್ರೀಕರಣದಲ್ಲಿ ಹೇಗೆ ಬಳಸಲಾಗುತ್ತದೆ ಮತ್ತು ಅವು ಕೈಗಾರಿಕಾ ಅಭಿವೃದ್ಧಿ 4.0 ಯಲ್ಲಿ ಹೇಗೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿಕೊಟ್ಟರು.

ವಿಘ್ನೇಶ್ ವಿ ಕಿಣಿ ಸೀಮನ್ಸ್ ಶ್ರೇಷ್ಟತಾ ಕೇಂದ್ರ, ಎನ್ಐಟಿಕೆ ಸುರತ್ಕಲ್ ಇವರು ಸಂವೇದಕಗಳು ಮತ್ತು ಆಕ್ಯೂವೇಟರ್ ಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಸಂವೇದಕಗಳು ಮತ್ತು ಆಕ್ಯೂವೇಟರ್ ಗಳ ಮೂಲಗಳು, ಅವುಗಳ ಪ್ರಕಾರಗಳು, ಕಾರ್ಯಗಳು ಮತ್ತು ಆಟೋಮೇಷನ್ ಮತ್ತು ರೋಬೋಟಿಕ್ಸ್ ನಂತಹ ಕ್ಷೇತ್ರಗಳಲ್ಲಿ ನೈಜ ಪ್ರಪಂಚದ ಅನ್ವಯಿಕೆಗಳ ಬಗ್ಗೆ ತಿಳಿಸಿಕೊಟ್ಟರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಅಮರೇಶ್ ಹೆಬ್ಬಾರ್ ಮತ್ತು ಶಾದ್ವಲ ಸೆಬಾಸ್ಟಿಯನ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಶಿವರಾಜ್ ಪಿ ಮತ್ತು ಸಾಯಿ ಚರಣ್ ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!