23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

ವೇಣೂರು: ಕುಂಭಶ್ರೀ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರವನ್ನು 24 ಜುಲೈ 2025 ರಂದು ವಿಜೃಂಭಣೆಯಿಂದ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಕೊಕ್ರಾಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ , ಕರ್ನಾಟಕ ರಾಜ್ಯ ಹೈಸ್ಕೂಲ್ ಸಹ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ರಿಯಾಸ್ ರವರು ಉದ್ಘಾಟಿಸಿ ಮಾತನಾಡಿ “ಸಿಎ ವೃತ್ತಿ ಸಾಧನೆಗೆ ಪರಿಶ್ರಮ, ಸಮರ್ಪಣೆ ಹಾಗೂ ನಿಷ್ಠೆ ಮುಖ್ಯ. ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಶ್ರಮಿಸಬೇಕು” ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.

ವಿಶೇಷ ಅತಿಥಿಗಳಾಗಿ ಕಿರಣ್ ಆನಂತ್ರಾಯ್ ವಸಂತ್ (ಚಾರ್ಟರ್ಡ್ ಅಕೌಂಟೆಂಟ್) ತಮ್ಮ ವೃತ್ತಿಜೀವನದ ಅನುಭವ ಹಂಚಿಕೊಂಡು “ಅಕೌಂಟೆಂಟ್‌ಗಳು ಕೇವಲ ಸಂಖ್ಯೆಗಳ ಲೆಕ್ಕಾಚಾರ ಮಾಡುವವರಲ್ಲ; ಅವರು ಆರ್ಥಿಕ ಕಥೆಗಾರರು. ಪ್ರಾಮಾಣಿಕತೆ, ಪರಿಶ್ರಮ ಹಾಗೂ ಸಮಯ ನಿರ್ವಹಣೆ ಈ ವೃತ್ತಿಯ ಆಧಾರಸ್ತಂಭಗಳು” ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಕುಮಾರಿ ದೀಪಿಕಾ ವಸಾನಿ (ಚಾರ್ಟರ್ಡ್ ಅಕೌಂಟೆಂಟ್) , ಕುಂಭಶ್ರೀ ವಿದ್ಯಾ ಸಂಸ್ಥೆ ಸಂಸ್ಥಾಪಕ ಗಿರೀಶ್ ಕೆ.ಹೆಚ್., ಪ್ರಾಂಶುಪಾಲೆ ಶ್ರೀಮತಿ ಓಮನಾ ಎಂ.ಎ. ಹಾಗೂ ಸಂಚಾಲಕ ಲೆಫ್ಟಿನೆಂಟ್ ಅಶ್ವಿತ್ ಕುಲಾಲ್ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶಗಳನ್ನು ನೀಡಿದರು.


ಜೀವಶಾಸ್ತ್ರ ಉಪನ್ಯಾಸಕ ಮನೋಜ್ ಅವರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಾಗಾರದ ವೇಳೆ ವಿದ್ಯಾರ್ಥಿಗಳಿಗೆ ಸಿಎ ಕೋರ್ಸ್‌ನ ಹಂತಗಳು, ಓದು ವಿಧಾನ, ಪರೀಕ್ಷಾ ತಯಾರಿ ಹಾಗೂ ವೃತ್ತಿ ಅವಕಾಶಗಳ ಕುರಿತು ಸಂಪೂರ್ಣ ವಿವರಗಳನ್ನು ನೀಡಲಾಯಿತು.

ಉಪನ್ಯಾಸಕಿ ಲಿಖಿತಾ ಎಂ. ಸ್ವಾಗತಿಸಿದರು. ಗಣಕವಿಜ್ಞಾನ ಉಪನ್ಯಾಸಕ ಅಭಿಲಾಷ್ ಕಾಮತ್ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶರಣ್ಯ ಕೆ.ಎಸ್. ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮಕ್ಕೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ಮೂಡುಕೋಡಿ ನಿವಾಸಿ ಜಿನ್ನಮ್ಮ ನಿಧನ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!