July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ’ಗೆ ಹೋಗುವ ರಸ್ತೆಯು ಸುಮಾರು 3-4 ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇಷ್ಟರವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಈ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಸ್ತುತ ಈ ರಸ್ತೆಯಲ್ಲಿ ಪ್ರಯಾಣಿಸಲು ತುಂಬಾ ಕಷ್ಟದಾಯಕವಾಗಿದೆ. ಮಳೆಗಾಲದಲ್ಲಿ ಜನರು ಬಹಳಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ರಸ್ತೆ ಹಲವಾರು ವಿದ್ಯಾರ್ಥಿಗಳು, ದಿನ ಕೂಲಿ-ಕಾರ್ಮಿಕರು ನಿತ್ಯ ಸಂಚರಿಸುವ ರಸ್ತೆಯಾಗಿರುತ್ತದೆ. ಜೊತೆಗೆ ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಕಾಲನಿಗೆ ಹಾದು ಹೋಗುವ ರಸ್ತೆಯಾಗಿದೆ.
ಆದಷ್ಟು ಶೀಘ್ರವಾಗಿ ಈ ರಸ್ತೆಯನ್ನು ಕಾಂಕ್ರಿಟೀಕರಣಗೊಳಸಿ ಅಭಿವೃದ್ಧಿ ರಸ್ತೆಯನ್ನಾಗಿ ಮಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಚಾರ್ಮಾಡಿ ಅಭಿವೃದ್ಧಿ ಅಧಿಕಾರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ, ಉಜಿರೆ ಬ್ಲಾಕ್ ಸಮಿತಿ ಸದಸ್ಯರು ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya
error: Content is protected !!