23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಜು. 25 ರಂದು ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ’ಅತ್ ಖತೀಬರಾದ ಹನೀಫ್ ಫೈಝಿಯವರು ದುವಾ ಮೂಲಕ ನಡೆಯಿತು.

ಪ್ರಧಾನ ಕಾರ್ಯದರ್ಶಿ ರಝಾಕ್ ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಅಧ್ಯಕ್ಷ ಬಿ ಎ ನಝೀರ್ ರವರು ಕಳೆದ ಸಾಲಿನ ಅವಧಿಯಲ್ಲಿ ನಡೆದ ಮಸೀದಿಯ ಅಭಿವೃದ್ಧಿ ಕಾರ್ಯವನ್ನು ವಿವರಿಸಿದರು. ಮಹಮ್ಮದ್ ಬಿ ಎಚ್ ಗೌರವ ಅಧ್ಯಕ್ಷತೆಯಲ್ಲಿ ಹಳೆಯ ಸಮಿತಿಯನ್ನು ಬರ್ಕಾಸುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ರಝಾಕ್ ಕೊಡಿಸಭೆ, ಉಪಾಧ್ಯಕ್ಷರಾಗಿ ಬಿ.ಶೇಕುಂಞ, ಬದ್ರುದ್ದಿನ್ ಮಟ್ಲ, ಜೊತೆ ಕಾರ್ಯದರ್ಶಿಗಳಾಗಿ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಯಾಗಿ ಫೈಝಲ್ ಐ.ಜೆ ಆಯ್ಕೆಯಾದರು.

ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ ಎಚ್ ಮಹಮ್ಮದ್, ಗೌರವ ಸಲಹೆಗಾರರಾಗಿ ನಝೀರ್ ಬಿ. ಎ ರವರು ಆಯ್ಕೆಯಾದರು . ಈ ಸಂದರ್ಭದಲ್ಲಿ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಸಭೆಯನ್ನು ಕಾರ್ಯದರ್ಶಿ ರಝಾಕ್ ಕೊಡಿಸಭೆ ಸ್ವಾಗತಿಸಿ, ಯಾಕೂಬ್ ಮಾಸ್ಟರ್ ನಿರೂಪಿಸಿದರು.

Related posts

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya
error: Content is protected !!