22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಜು. 25 ರಂದು ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ’ಅತ್ ಖತೀಬರಾದ ಹನೀಫ್ ಫೈಝಿಯವರು ದುವಾ ಮೂಲಕ ನಡೆಯಿತು.

ಪ್ರಧಾನ ಕಾರ್ಯದರ್ಶಿ ರಝಾಕ್ ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಅಧ್ಯಕ್ಷ ಬಿ ಎ ನಝೀರ್ ರವರು ಕಳೆದ ಸಾಲಿನ ಅವಧಿಯಲ್ಲಿ ನಡೆದ ಮಸೀದಿಯ ಅಭಿವೃದ್ಧಿ ಕಾರ್ಯವನ್ನು ವಿವರಿಸಿದರು. ಮಹಮ್ಮದ್ ಬಿ ಎಚ್ ಗೌರವ ಅಧ್ಯಕ್ಷತೆಯಲ್ಲಿ ಹಳೆಯ ಸಮಿತಿಯನ್ನು ಬರ್ಕಾಸುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ರಝಾಕ್ ಕೊಡಿಸಭೆ, ಉಪಾಧ್ಯಕ್ಷರಾಗಿ ಬಿ.ಶೇಕುಂಞ, ಬದ್ರುದ್ದಿನ್ ಮಟ್ಲ, ಜೊತೆ ಕಾರ್ಯದರ್ಶಿಗಳಾಗಿ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಯಾಗಿ ಫೈಝಲ್ ಐ.ಜೆ ಆಯ್ಕೆಯಾದರು.

ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ ಎಚ್ ಮಹಮ್ಮದ್, ಗೌರವ ಸಲಹೆಗಾರರಾಗಿ ನಝೀರ್ ಬಿ. ಎ ರವರು ಆಯ್ಕೆಯಾದರು . ಈ ಸಂದರ್ಭದಲ್ಲಿ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಸಭೆಯನ್ನು ಕಾರ್ಯದರ್ಶಿ ರಝಾಕ್ ಕೊಡಿಸಭೆ ಸ್ವಾಗತಿಸಿ, ಯಾಕೂಬ್ ಮಾಸ್ಟರ್ ನಿರೂಪಿಸಿದರು.

Related posts

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya
error: Content is protected !!