23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣದಲ್ಲಿ ಒಂದು ಸುಸಜ್ಜಿತವಾದ ಅಂಬೇಡ್ಕರ್ ಭವನ ಇಲ್ಲದ ಕಾರಣ ಇದೀಗ ದೊಡ್ಡ ಮಟ್ಟದ ನೂತನ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಮೊದಲ ಹಂತದ ಮೂರು ಕೋಟಿ ರೂ .ಅನುದಾನ ಮಂಜೂರಾಗಿದ್ದು ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಹಾಗೂ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಉಳಿದ ಅನುದಾನವನ್ನು ಸರಕಾರದಿಂದ ಒದಗಿಸುವಂತೆ ಕರ್ನಾಟಕ ದಲಿತ ಚಳವಳಿ
50 ರ ಸಂಭ್ರಮಾಚರಣ ಸಮಿತಿಯ ಪದಾಧಿಕಾರಿಗಳ ನಿಯೋಗದಿಂದ ಜು.25ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ತಾಲೂಕು ಕೇಂದ್ರವಾದ ಬೆಳ್ತಂಗಡಿಯಲ್ಲಿ 15ಕೋಟಿ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವಂತೆ ಈ ಹಿಂದಿನಿಂದಲೂ ಬೇಡಿಕೆಯನ್ನು ದಲಿತ ಸಂಘಟನೆಗಳು ಇಡುತ್ತಾ ಬಂದಿದ್ದು ಇದೀಗ ಅಂಬೇಡ್ಕರ್ ಭವನಕ್ಕೆ ಭೂಮಿ ಮಂಜೂರಾತಿಯೂ ಆಗಿದೆ.
ಅಂಬೇಡ್ಕರ್ ಭವನಕ್ಕೆ ಕಾದಿರಿಸಿದ ಜಾಗವನ್ನು ಅಂಬೇಡ್ಕರ್ ಭವನದ ಹೆಸರಿನ ಪಹಣಿ ಪತ್ರದಲ್ಲಿ ಕೂಡಲೇ ನಮೂದಿಸುವಂತೆ ದಲಿತ ಮುಖಂಡರ ನಿಯೋಗವು ಸಚಿವರಲ್ಲಿ ವಿನಂತಿಸಿಕೊಂಡಿದ್ದು ಸಚಿವರು ಸ್ಥಳದಲ್ಲೇ ದೂರವಾಣಿ ಮೂಲಕ ಈ ಬಗ್ಗೆ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಎಲ್ಲರ ಬೇಡಿಕೆಯಂತೆ ಕೆ.ಪಿ.ಸಿ.ಸಿ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಶಿಫಾರಸ್ಸಿನ ಮೇರೆಗೆ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಕರ್ನಾಟಕ ಸರಕಾರದಿಂದ ಮೊದಲ ಹಂತದಲ್ಲಿ ರೂ. 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ಇದಕ್ಕಾಗಿ ರಾಜ್ಯ ಸರಜಾರಕ್ಕೆ ಹಾಗೂ ಉಸ್ತುವಾರಿ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇವೆ.
ಈ ಹಿನ್ನಲೆಯಲ್ಲಿ ಈಗಾಗಲೆ ಬೆಳ್ತಂಗಡಿ ಪಟ್ಟಣದಲ್ಲಿ ಅಂಬೇಡ್ಕರ್ ಭವನದ ಅಗತ್ಯ ತುಂಬಾ ಇದ್ದು ಮೊದಲ ಹಂತದ ಅನುದಾನಕ್ಕೆ ಅನುಗುಣವಾಗಿ ಅಂದಾಜು ಪಟ್ಟಿ ತಯಾರಿಸಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಅತಿ ಶೀಘ್ರವಾಗಿ ಶಿಲಾನ್ಯಾಸ ನಡೆಸಿ ಕಾಮಗಾರಿ ಆರಂಭಿಸಲು ಸಂಬಂಧಿಸಿದ ಇಲಾಖೆಗೆ ಆದೇಶ ನೀಡುವಂತೆಯೂ ಹೆಚ್ಚುವರಿಯಾಗಿ 12ಕೋಟಿ ರೂ ಅನುದಾನವನ್ನು ಮಂಜೂರು ಮಾಡುವಂತೆಯೂ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ವಿಧಾನ ಪರಿಷತ್ ಸದಸ್ಯ ಐವನ್ ಡಿ.ಸೋಜಾ, ನಿಯೋಗದಲ್ಲಿ ಸಂಘಟನೆಯ ಮುಖಂಡರುಗಳಾದ ಬಿ.ಕೆ., ವಸಂತ್, ಶೇಖರ ಕುಕ್ಕೇಡಿ, ಚೆನ್ನಕೇಶವ, ಸಂಜೀವ ಆರ್, ವೆಂಕಣ್ಣ ಕೊಯ್ಯೂರು, ರಮೇಶ್ ಆರ್, ಪ್ರಭಾಕರ ಓಡಲ್ನಾಳ ಮತ್ತಿತರರು ಇದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!