September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಉಜಿರೆಯ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ದಂಪತಿಯ ಪುತ್ರಿ ವಿಧೂಷಿ ಸಿ.ಎ ಸುಕನ್ಯಾ ಕಾಮತ್ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಅಂತಿಮ ಹಾಗೂ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.
ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ತರಬೇತಿಯನ್ನು ಪೂರ್ಣಗೊಳಿಸಿರುತ್ತಾರೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ಡಿ.ಎಂ ಪಿ.ಯು ಕಾಲೇಜಿನ ಹಳೇಯ ವಿದ್ಯಾರ್ಥಿನಿ. ಪ್ರಸ್ತುತ ಪೈರಿಯನ್ ಸರ್ವಿಸಸ್ ಮಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

Related posts

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
error: Content is protected !!