23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಉಜಿರೆಯ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ದಂಪತಿಯ ಪುತ್ರಿ ವಿಧೂಷಿ ಸಿ.ಎ ಸುಕನ್ಯಾ ಕಾಮತ್ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಅಂತಿಮ ಹಾಗೂ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.
ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ತರಬೇತಿಯನ್ನು ಪೂರ್ಣಗೊಳಿಸಿರುತ್ತಾರೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ಡಿ.ಎಂ ಪಿ.ಯು ಕಾಲೇಜಿನ ಹಳೇಯ ವಿದ್ಯಾರ್ಥಿನಿ. ಪ್ರಸ್ತುತ ಪೈರಿಯನ್ ಸರ್ವಿಸಸ್ ಮಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

Related posts

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya
error: Content is protected !!