25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆ :ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ.) ಸಂಸ್ಥೆಯಲ್ಲಿ ಇಂದು (ಜು.26) ಕಾರ್ಗಿಲ್ ವಿಜಯ ದಿವಸ್ ಆಚರಣೆ ನಡೆಯಿತು.

ಮುಖ್ಯ ಅತಿಥಿ, ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಎನ್ ಸಿ ಸಿ ಅಧಿಕಾರಿ ಡಾ. ಭಾನುಪ್ರಕಾಶ್ ಬಿ ಇ ಮಾತನಾಡಿ “ ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರು ಹುತಾತ್ಮರಾದ ಕಾರಣ ಭಾರತವು ಈ ದಿನಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತದೆ. ಅವರ ಬಲಿದಾನದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಈ ಯುದ್ಧವು 1999 ಮೇ ತಿಂಗಳಿನಲ್ಲಿ ಆರಂಭವಾಗಿ ಜುಲೈ 26ರವರೆಗೆ ನಡೆದಿದ್ದು, ಯುದ್ಧದಲ್ಲಿ ನಮ್ಮ ದೇಶದ ಗೆಲುವನ್ನು ಸಂಭ್ರಮಿಸುವ ದಿನವೂ ಇದಾಗಿದೆ. ದೇಶದಾದ್ಯಂತ ಕಾರ್ಗಿಲ್‌ ವಿಜಯ ದಿನವನ್ನು ಆಚರಿಸಲಾಗುತ್ತಿದ್ದು, ಈ ವರ್ಷ ಕಾರ್ಗಿಲ್ ವಿಜಯದ 26ನೇ ವರ್ಷವನ್ನೂ ಆಚರಿಸಲಾಗುತ್ತಿದೆ” ಎಂದರು.

“ದೇಶಪ್ರೇಮದೊಂದಿಗೆ ತ್ಯಾಗ ಪ್ರಾಮಾಣಿಕತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಮಾದರಿ ಶಿಕ್ಷಕರಾಗಿ” ಎಂದು ಅವರು ಶುಭ ಹಾರೈಸಿದರು.

ಪ್ರಾಂಶುಪಾಲ ಡಾ.ಸಂತೋಷ್ ಸಲ್ಡಾನ್ಹ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರಯೋಧರು ಸದೆಬಡಿದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ಆ ದಿನವನ್ನು, ಶೌರ್ಯದ ನೆನಪಿಗಾಗಿ, ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಭವಿಷ್ಯದಲ್ಲಿ ಶಿಕ್ಷಕರಾಗುವ ನೀವೆಲ್ಲರೂ ದೇಶದ ಸೈನಿಕರನ್ನು ನಿರ್ಮಿಸುವಂತವರಾಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪನ್ಯಾಸಕ ಮಂಜು ಆರ್ ಪ್ರಾಸ್ತವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪ್ರಶಿಕ್ಷಣಾರ್ಥಿಗಳಾದ ರಾಹಿಲ ಮತ್ತು ಬಳಗ ಪ್ರಾರ್ಥಿಸಿ, ರಾಹಿಝ ಸ್ವಾಗತಿಸಿ, ಪೂರ್ಣಿಮಾ ವಂದಿಸಿ, ಜಯಶ್ರೀ ವ್ಯಕ್ತಿ ಪರಿಚಯ ಮಾಡಿದರು. ಸಲ್ವ ಕಾರ್ಯಕ್ರಮ ನಿರೂಪಿಸಿದರು.

Related posts

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya
error: Content is protected !!