July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಗೇರುಕಟ್ಟೆ: ಕರ್ನಾಟಕ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಮಂಗಳೂರು ಇದರ ಸಹಯೋಗದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನ ಕಳಿಯ ಶಾಖೆಯಲ್ಲಿ ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಮತ್ತು ಧರ್ಮದ ರಕ್ಷಣೆಗೆ ಭಾರತೀಯರೆಲ್ಲರೂ ದೃಢಸಂಕಲ್ಪ ಮಾಡಬೇಕೆಂದು ತಿಳಿಸಿ ದೇಶದ ರಕ್ಷಣೆಗಾಗಿ ಅಹರ್ನಿಶಿ ಕಾರ್ಯನಿರ್ವಹಿಸುವ ಯೋಧರ ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಸಾಮೂಹಿಕ ಪ್ರಾರ್ಥನೆಯು ಬಲವನ್ನು ನೀಡುವುದೆಂದರು.

ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯ ಬಗ್ಗೆ ಮಾತನಾಡಿದ ಸತೀಶ್ ನಾಳ ಭಾರತ-ಪಾಕ್ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ನೆಲೆಯೂರಿದ ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಯೋಧರು ತೋರಿದ ಪರಾಕ್ರಮವನ್ನು ತಿಳಿಸಿ ಹುತಾತ್ಮರಾದ ಸೈನಿಕರನ್ನು ಸ್ಮರಿಸುವುದು ನಮ್ಮ ಕರ್ತವ್ಯವೆಂದು ತಿಳಿಸಿದರು.

ಕೇಂದ್ರದ ಸಹ ಶಿಕ್ಷಕ ಸುಕೇಶ, ಸಂಚಾಲಕರಾದ ವಿಜಯ, ವರದಿ ಪ್ರಮುಖ ಕೇಶವ, ಅಶೋಕ, ವಸಂತ, ದಿವಾಕರ, ಮಧುಕರ, ರತ್ನಾಕರ, ಗಣೇಶ್, ಅವಿನಾಶ ಮತ್ತು ಅರುಣ ,ಭಾರತಿ, ಶುಭಮಂಗಳ, ಪದ್ಮಲತಾ, ಧರಿತ್ರಿ ಉಪಸ್ಥಿತರಿದ್ದರು. ಯೋಗ ಬಂಧು ಶಿವಣ್ಣ ವಂದಿಸಿದರು.

Related posts

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya
error: Content is protected !!