25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಗೇರುಕಟ್ಟೆ: ಕರ್ನಾಟಕ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಮಂಗಳೂರು ಇದರ ಸಹಯೋಗದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನ ಕಳಿಯ ಶಾಖೆಯಲ್ಲಿ ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಮತ್ತು ಧರ್ಮದ ರಕ್ಷಣೆಗೆ ಭಾರತೀಯರೆಲ್ಲರೂ ದೃಢಸಂಕಲ್ಪ ಮಾಡಬೇಕೆಂದು ತಿಳಿಸಿ ದೇಶದ ರಕ್ಷಣೆಗಾಗಿ ಅಹರ್ನಿಶಿ ಕಾರ್ಯನಿರ್ವಹಿಸುವ ಯೋಧರ ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಸಾಮೂಹಿಕ ಪ್ರಾರ್ಥನೆಯು ಬಲವನ್ನು ನೀಡುವುದೆಂದರು.

ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯ ಬಗ್ಗೆ ಮಾತನಾಡಿದ ಸತೀಶ್ ನಾಳ ಭಾರತ-ಪಾಕ್ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ನೆಲೆಯೂರಿದ ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಯೋಧರು ತೋರಿದ ಪರಾಕ್ರಮವನ್ನು ತಿಳಿಸಿ ಹುತಾತ್ಮರಾದ ಸೈನಿಕರನ್ನು ಸ್ಮರಿಸುವುದು ನಮ್ಮ ಕರ್ತವ್ಯವೆಂದು ತಿಳಿಸಿದರು.

ಕೇಂದ್ರದ ಸಹ ಶಿಕ್ಷಕ ಸುಕೇಶ, ಸಂಚಾಲಕರಾದ ವಿಜಯ, ವರದಿ ಪ್ರಮುಖ ಕೇಶವ, ಅಶೋಕ, ವಸಂತ, ದಿವಾಕರ, ಮಧುಕರ, ರತ್ನಾಕರ, ಗಣೇಶ್, ಅವಿನಾಶ ಮತ್ತು ಅರುಣ ,ಭಾರತಿ, ಶುಭಮಂಗಳ, ಪದ್ಮಲತಾ, ಧರಿತ್ರಿ ಉಪಸ್ಥಿತರಿದ್ದರು. ಯೋಗ ಬಂಧು ಶಿವಣ್ಣ ವಂದಿಸಿದರು.

Related posts

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!