July 23, 2026
ಅಪಘಾತವರದಿ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

ಧರ್ಮಸ್ಥಳ: ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಎರಡು ಮರಗಳು ಉರುಳಿದ ಪರಿಣಾಮ ಸಂಚಾರಕ್ಕೆ ತೊಂದರೆಯಾದ ಘಟನೆ ಜು.26ರಂದು ನಡೆದಿದೆ.ಮಂಜುನಾಥ್ ಶೆಟ್ಟಿ ಅವರ ಮನೆಯ ಬಳಿ ಮತ್ತು ಮೋಹನ್ ಮಡಿವಾಳ ಅವರ ಮನೆಯ ಬಳಿ ಮರ ಬಿದ್ದಿದ್ದರಿಂದ ಸಂಚಾರಕ್ಕೆ ತೊಂದರೆಯಾಯಿತು.

ಮರವನ್ನು ಸ್ಥಳೀಯರು ತೆರವು ಮಾಡಿದರೂ ವಿದ್ಯುತ್ ಕಂಬ ಮಾರ್ಗಕ್ಕೆ ಅಡ್ಡಲಾಗಿ ಉರುಳಿ ಬಿದ್ದಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದೆ.ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಜಾಂಟಿ ಸುಧಾಕರ್, ತ್ವರಿತವಾಗಿ ಮರ ವಿಲೇವಾರಿ ಮಾಡಲು ಸಹಕರಿಸಿದರು ಹಾಗೂ ಊರಿನವರಾದ ಚಂದ್ರಹಾಸ, ಮಹೇಶ್ ಕುಲಾಲ್, ಸುನಿತಾ ಶ್ರೀಧ‌ರ್, ಶ್ರೀಧ‌ರ್, ಮೋಹನ್ ಮಡಿವಾಳ, ನವೀನ, ಜಯ ಮತ್ತು ಅಭಿಷೇಕ್ ಸಾಥ್ ನೀಡಿದರು.

Related posts

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!