22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

ಗುರಿಯ ಹಿಂದೆ ಹೋದವರು ಯಶಸ್ವಿಯಾಗುತ್ತಾರೆ. ಹಣ, ಪ್ರತಿಷ್ಠೆಯ ಹಿಂದೆ ಬಿದ್ದವರು ಬದುಕಿನಲ್ಲಿ ಗೆಲ್ಲುವುದಿಲ್ಲ ಎಂದು ಖ್ಯಾತ ಮನೋವಿಶ್ಲೇಷಕ ಮತ್ತು ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಬಾರ್ಯ ಅವರು ಹೇಳಿದರು.


ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ ನ ಸಭಾಂಗಣದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಹಣ ಬಲವೆ ಶ್ರೇಷ್ಠ ಎಂದು ಕಂಡರೂ, ನೈತಿಕತೆಯಿಲ್ಲದ ಹಣ ಗಳಿಕೆಗೆ ಮಾನ್ಯತೆಯಿಲ್ಲ ಎಂದರು.


ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ಮನುಷ್ಯ ಬುದ್ಧಿವಂತ ಜೀವಿ. ಪರಿಶ್ರಮ ಪಟ್ಟರೆ ಮನುಷ್ಯ ಎಷ್ಟು ಉನ್ನತ ಸ್ಥಾನಕ್ಕೂ ಏರ ಬಹುದು. ಮನುಷ್ಯನಿಗೆ ಮಾತ್ರ ದೇವರು ಅನುಗ್ರಹಿಸಿದ ವರ ಇದೆಂದು ಹೇಳಿದರು. ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೀವ ವಿಜ್ಞಾನ ವಿಭಾಗದ ಉಪನ್ಯಾಸಕ ಪ್ರಜ್ವಿತ್ ರೈ ಸ್ವಾಗತಿಸಿದರು.


ನೀಟ್ ಬಗ್ಗೆ ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ಭಟ್, ಜೆ ಇ ಇ ಬಗ್ಗೆ ಭೌತ ವಿಜ್ಞಾನ ವಿಭಾಗದ ಶ್ರೀನಿಧಿ ರಾಜ್ ಶೆಟ್ಟಿ, ಸಿ ಇ ಟಿ ಬಗ್ಗೆ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಈಶ್ವರ್ ಶರ್ಮ ಮಾಹಿತಿ ನೀಡಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸುನಿಧಿ ಪ್ರಾರ್ಥಿಸಿದರು. ಸಮಾರಂಭದ ಕೊನೆಯಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು. ಕನ್ನಡ ವಿಭಾಗದ ಮಹಮ್ಮದ್ ಮುನೀರ್ ನಿರೂಪಿಸಿ, ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya
error: Content is protected !!