23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

ಗುರಿಯ ಹಿಂದೆ ಹೋದವರು ಯಶಸ್ವಿಯಾಗುತ್ತಾರೆ. ಹಣ, ಪ್ರತಿಷ್ಠೆಯ ಹಿಂದೆ ಬಿದ್ದವರು ಬದುಕಿನಲ್ಲಿ ಗೆಲ್ಲುವುದಿಲ್ಲ ಎಂದು ಖ್ಯಾತ ಮನೋವಿಶ್ಲೇಷಕ ಮತ್ತು ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಬಾರ್ಯ ಅವರು ಹೇಳಿದರು.


ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ ನ ಸಭಾಂಗಣದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಹಣ ಬಲವೆ ಶ್ರೇಷ್ಠ ಎಂದು ಕಂಡರೂ, ನೈತಿಕತೆಯಿಲ್ಲದ ಹಣ ಗಳಿಕೆಗೆ ಮಾನ್ಯತೆಯಿಲ್ಲ ಎಂದರು.


ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ಮನುಷ್ಯ ಬುದ್ಧಿವಂತ ಜೀವಿ. ಪರಿಶ್ರಮ ಪಟ್ಟರೆ ಮನುಷ್ಯ ಎಷ್ಟು ಉನ್ನತ ಸ್ಥಾನಕ್ಕೂ ಏರ ಬಹುದು. ಮನುಷ್ಯನಿಗೆ ಮಾತ್ರ ದೇವರು ಅನುಗ್ರಹಿಸಿದ ವರ ಇದೆಂದು ಹೇಳಿದರು. ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೀವ ವಿಜ್ಞಾನ ವಿಭಾಗದ ಉಪನ್ಯಾಸಕ ಪ್ರಜ್ವಿತ್ ರೈ ಸ್ವಾಗತಿಸಿದರು.


ನೀಟ್ ಬಗ್ಗೆ ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ಭಟ್, ಜೆ ಇ ಇ ಬಗ್ಗೆ ಭೌತ ವಿಜ್ಞಾನ ವಿಭಾಗದ ಶ್ರೀನಿಧಿ ರಾಜ್ ಶೆಟ್ಟಿ, ಸಿ ಇ ಟಿ ಬಗ್ಗೆ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಈಶ್ವರ್ ಶರ್ಮ ಮಾಹಿತಿ ನೀಡಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸುನಿಧಿ ಪ್ರಾರ್ಥಿಸಿದರು. ಸಮಾರಂಭದ ಕೊನೆಯಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು. ಕನ್ನಡ ವಿಭಾಗದ ಮಹಮ್ಮದ್ ಮುನೀರ್ ನಿರೂಪಿಸಿ, ವಂದಿಸಿದರು.

Related posts

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya
error: Content is protected !!