September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

ಕಕ್ಕಿಂಜೆ: ಇಲ್ಲಿಯ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ಥ್ ಕೆರೊಲಿನಾ ವೈದ್ಯಕೀಯ ವಿಧ್ಯಾರ್ಥಿಗಳ ತಂಡವು ಯೇನೆಪೊಯ ದಂತ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಜು.25 ರಂದು ಭೇಟಿ ನೀಡಿ ಗ್ರಾಮೀಣ ಪ್ರದೇಶದ ವೈದ್ಯಕೀಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ಚರ್ಚಿಸಿದರು,ಮತ್ತು ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಮಾಹಿತಿ ಪಡೆದರು.

ಆಸ್ಪತ್ರೆಯ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಮಾತನಾಡಿ ನಗರ ಪ್ರದೇಶಗಳಲ್ಲಿ ಸೌಲಭ್ಯಗಳ ಲಭ್ಯತೆ ಹೆಚ್ಚು ಇದ್ದು ಯಾವುದೇ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಹುದು. ಆದರೆ ಹಳ್ಳಿ ಪ್ರದೇಶಗಳಲ್ಲಿ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ನಿಭಾಯಿಸಲು ಕಷ್ಚಕರವಾಗಿದ್ದು, ಮತ್ತು ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇತರ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಮುಖ್ಯ ವೈದ್ಯಾಧಿಕಾರಿ ಡಾ.ಅಲ್ಬಿನ್ ಜೋಸೆಫ್, ವೈದ್ಯಾಧಿಕಾರಿಗಳಾದ ಡಾ. ಮೌಲ್ಯ, ಡಾ. ಶಾರೂನ್, ದಂತ ವೈದ್ಯಾಧಿಕಾರಿ ಡಾ. ಮಹಮ್ಮದ್ ಮಿಫ್ರಾ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ಪ್ರಮಾದ ಪ್ರಭಾಕರ್, ಡಾ.ಅಲಿ, ಮ್ಯಾನೇಜರ್ ಭರತ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!