32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಗೇರುಕಟ್ಟೆ: ಕರ್ನಾಟಕ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಮಂಗಳೂರು ಇದರ ಸಹಯೋಗದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನ ಕಳಿಯ ಶಾಖೆಯಲ್ಲಿ ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಮತ್ತು ಧರ್ಮದ ರಕ್ಷಣೆಗೆ ಭಾರತೀಯರೆಲ್ಲರೂ ದೃಢಸಂಕಲ್ಪ ಮಾಡಬೇಕೆಂದು ತಿಳಿಸಿ ದೇಶದ ರಕ್ಷಣೆಗಾಗಿ ಅಹರ್ನಿಶಿ ಕಾರ್ಯನಿರ್ವಹಿಸುವ ಯೋಧರ ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಸಾಮೂಹಿಕ ಪ್ರಾರ್ಥನೆಯು ಬಲವನ್ನು ನೀಡುವುದೆಂದರು.

ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯ ಬಗ್ಗೆ ಮಾತನಾಡಿದ ಸತೀಶ್ ನಾಳ ಭಾರತ-ಪಾಕ್ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ನೆಲೆಯೂರಿದ ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಯೋಧರು ತೋರಿದ ಪರಾಕ್ರಮವನ್ನು ತಿಳಿಸಿ ಹುತಾತ್ಮರಾದ ಸೈನಿಕರನ್ನು ಸ್ಮರಿಸುವುದು ನಮ್ಮ ಕರ್ತವ್ಯವೆಂದು ತಿಳಿಸಿದರು.

ಕೇಂದ್ರದ ಸಹ ಶಿಕ್ಷಕ ಸುಕೇಶ, ಸಂಚಾಲಕರಾದ ವಿಜಯ, ವರದಿ ಪ್ರಮುಖ ಕೇಶವ, ಅಶೋಕ, ವಸಂತ, ದಿವಾಕರ, ಮಧುಕರ, ರತ್ನಾಕರ, ಗಣೇಶ್, ಅವಿನಾಶ ಮತ್ತು ಅರುಣ ,ಭಾರತಿ, ಶುಭಮಂಗಳ, ಪದ್ಮಲತಾ, ಧರಿತ್ರಿ ಉಪಸ್ಥಿತರಿದ್ದರು. ಯೋಗ ಬಂಧು ಶಿವಣ್ಣ ವಂದಿಸಿದರು.

Related posts

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya
error: Content is protected !!