23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಗೇರುಕಟ್ಟೆ: ಕರ್ನಾಟಕ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಮಂಗಳೂರು ಇದರ ಸಹಯೋಗದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನ ಕಳಿಯ ಶಾಖೆಯಲ್ಲಿ ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಮತ್ತು ಧರ್ಮದ ರಕ್ಷಣೆಗೆ ಭಾರತೀಯರೆಲ್ಲರೂ ದೃಢಸಂಕಲ್ಪ ಮಾಡಬೇಕೆಂದು ತಿಳಿಸಿ ದೇಶದ ರಕ್ಷಣೆಗಾಗಿ ಅಹರ್ನಿಶಿ ಕಾರ್ಯನಿರ್ವಹಿಸುವ ಯೋಧರ ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಸಾಮೂಹಿಕ ಪ್ರಾರ್ಥನೆಯು ಬಲವನ್ನು ನೀಡುವುದೆಂದರು.

ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯ ಬಗ್ಗೆ ಮಾತನಾಡಿದ ಸತೀಶ್ ನಾಳ ಭಾರತ-ಪಾಕ್ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ನೆಲೆಯೂರಿದ ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಯೋಧರು ತೋರಿದ ಪರಾಕ್ರಮವನ್ನು ತಿಳಿಸಿ ಹುತಾತ್ಮರಾದ ಸೈನಿಕರನ್ನು ಸ್ಮರಿಸುವುದು ನಮ್ಮ ಕರ್ತವ್ಯವೆಂದು ತಿಳಿಸಿದರು.

ಕೇಂದ್ರದ ಸಹ ಶಿಕ್ಷಕ ಸುಕೇಶ, ಸಂಚಾಲಕರಾದ ವಿಜಯ, ವರದಿ ಪ್ರಮುಖ ಕೇಶವ, ಅಶೋಕ, ವಸಂತ, ದಿವಾಕರ, ಮಧುಕರ, ರತ್ನಾಕರ, ಗಣೇಶ್, ಅವಿನಾಶ ಮತ್ತು ಅರುಣ ,ಭಾರತಿ, ಶುಭಮಂಗಳ, ಪದ್ಮಲತಾ, ಧರಿತ್ರಿ ಉಪಸ್ಥಿತರಿದ್ದರು. ಯೋಗ ಬಂಧು ಶಿವಣ್ಣ ವಂದಿಸಿದರು.

Related posts

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
error: Content is protected !!