30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

ನಿಡ್ಲೆ : ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಜು. 26 ರಂದು ಸಂಘದ ವಠಾರದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಧನಂಜಯ ಗೌಡ ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸ್ತುತ ಸಾಲಿನಲ್ಲಿ ಸಂಘವು ರೂ. 59,78,595.84 ಲಾಭ ಗಳಿಸಿದೆ. ಸದಸ್ಯರಿಗೆ ಶೇ.7% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಡೀಕಯ್ಯ ಎಮ್.ಕೆ, ನಿರ್ದೇಶಕರಾದ ವಿಜಯ್ ಕುಮಾರ್, ಆನಂದ ಗೌಡ ಎಮ್, ಕೆ. ಹೇಮಂತ್ ಗೌಡ, ಜಯರಾಮ ಪಾಳೆಂದೈ, ಶ್ರೀಮತಿ ವಿಜಯಲಕ್ಷ್ಮೀ, ರಾಜು, ಮೋಹನ್ ಪೂಜಾರಿ, ಧನಂಜಯ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ನಿರ್ದೇಶಕಿ ಶ್ರೀಮತಿ ಗಾಯತ್ರಿ ಎಚ್ ಗೌಡ ಪ್ರಾರ್ಥಿಸಿ, ಕೆ. ರಮೇಶ್ ರಾವ್ ಸ್ವಾಗತಿಸಿದರು. ಲೆಕ್ಕಿಗ ವೇಣುಗೋಪಾಲ ಬಿ. ಲೆಕ್ಕ ಪರಿಶೋಧನಾ ವರದಿ ಓದಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಪಿ. ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya
error: Content is protected !!