ನಿಡ್ಲೆ : ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಜು. 26 ರಂದು ಸಂಘದ ವಠಾರದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಧನಂಜಯ ಗೌಡ ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸ್ತುತ ಸಾಲಿನಲ್ಲಿ ಸಂಘವು ರೂ. 59,78,595.84 ಲಾಭ ಗಳಿಸಿದೆ. ಸದಸ್ಯರಿಗೆ ಶೇ.7% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಡೀಕಯ್ಯ ಎಮ್.ಕೆ, ನಿರ್ದೇಶಕರಾದ ವಿಜಯ್ ಕುಮಾರ್, ಆನಂದ ಗೌಡ ಎಮ್, ಕೆ. ಹೇಮಂತ್ ಗೌಡ, ಜಯರಾಮ ಪಾಳೆಂದೈ, ಶ್ರೀಮತಿ ವಿಜಯಲಕ್ಷ್ಮೀ, ರಾಜು, ಮೋಹನ್ ಪೂಜಾರಿ, ಧನಂಜಯ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ನಿರ್ದೇಶಕಿ ಶ್ರೀಮತಿ ಗಾಯತ್ರಿ ಎಚ್ ಗೌಡ ಪ್ರಾರ್ಥಿಸಿ, ಕೆ. ರಮೇಶ್ ರಾವ್ ಸ್ವಾಗತಿಸಿದರು. ಲೆಕ್ಕಿಗ ವೇಣುಗೋಪಾಲ ಬಿ. ಲೆಕ್ಕ ಪರಿಶೋಧನಾ ವರದಿ ಓದಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಪಿ. ಕಾರ್ಯಕ್ರಮ ನಿರೂಪಿಸಿದರು.











