23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

ನಿಡ್ಲೆ : ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಜು. 26 ರಂದು ಸಂಘದ ವಠಾರದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಧನಂಜಯ ಗೌಡ ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸ್ತುತ ಸಾಲಿನಲ್ಲಿ ಸಂಘವು ರೂ. 59,78,595.84 ಲಾಭ ಗಳಿಸಿದೆ. ಸದಸ್ಯರಿಗೆ ಶೇ.7% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಡೀಕಯ್ಯ ಎಮ್.ಕೆ, ನಿರ್ದೇಶಕರಾದ ವಿಜಯ್ ಕುಮಾರ್, ಆನಂದ ಗೌಡ ಎಮ್, ಕೆ. ಹೇಮಂತ್ ಗೌಡ, ಜಯರಾಮ ಪಾಳೆಂದೈ, ಶ್ರೀಮತಿ ವಿಜಯಲಕ್ಷ್ಮೀ, ರಾಜು, ಮೋಹನ್ ಪೂಜಾರಿ, ಧನಂಜಯ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ನಿರ್ದೇಶಕಿ ಶ್ರೀಮತಿ ಗಾಯತ್ರಿ ಎಚ್ ಗೌಡ ಪ್ರಾರ್ಥಿಸಿ, ಕೆ. ರಮೇಶ್ ರಾವ್ ಸ್ವಾಗತಿಸಿದರು. ಲೆಕ್ಕಿಗ ವೇಣುಗೋಪಾಲ ಬಿ. ಲೆಕ್ಕ ಪರಿಶೋಧನಾ ವರದಿ ಓದಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಪಿ. ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya
error: Content is protected !!