July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಜು. 25 ರಂದು ಜುಮಾ ನಮಾಝಿನ ಬಳಿಕ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದರಸ ಹಾಲ್ ಪೆರಾಲ್ದರಕಟ್ಟೆಯಲ್ಲಿ ನಡೆಯಿತು.


ಖತೀಬರಾದ ಶಂಸುದ್ದೀನ್ ದಾರಿಮಿ ಇವರು ದುಹಾಃ ನೇರವೇರಿಸಿದರು. ಸ್ವಲಾತ್ ಕಮೀಟಿ ಪೆರಾಲ್ದರಕಟ್ಟೆ ಇದರ ಪ್ರದಾನ ಕಾರ್ಯದರ್ಶಿಯಾದ ಹಮೀದ್ ಬಾವಿಬಳಿ ವಾರ್ಷಿಕ ವರದಿ ವಾಚನ ಮಾಡಿದರು. ಬದ್ರಿಯಾ ಆಡಳಿತ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್ ರವರು ಅಧ್ಯಕ್ಷತೆ ವಹಿಸಿದರು. ಎರಡು ವರ್ಷಗಳ ಅವದಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಿಂದಿನ ಸ್ವಲಾತ್ ಕಮೀಟಿಯನ್ನು ಬರ್ಕಾಸ್ತುಗೊಳಿಸಿ ನೂತನ ಸ್ವಲಾತ್ ಕಮಿಟಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಗೌರವ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕಾರಂದೂರು, ನೂತನ ಅಧ್ಯಕ್ಷರಾಗಿ ಹಸೈನಾರ್ ಹಸೈ ಮಂಜೊಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ಬಶೀರ್ ಮಸೀದಿಬಳಿ, ಉಪಾದ್ಯಕ್ಷರಾಗಿ ಅಕ್ಬರ್ ಮಟ್ಲ, ಕಾರ್ಯದರ್ಶಿಯಾಗಿ ಶಮೀರ್ ಮಸೀದಿಬಳಿ ಹಾಗೂ ಕಾರ್ಯಕಾರಣಿ ಸದಸ್ಯರಾಗಿ ನವಾಝ್ ಶರೀಫ್ ಕಟ್ಟೆ, ಸಾದಿಕ್ ಮಸೀದಿಬಳಿ, ಶಂಸುದ್ದೀನ್ ಕಟ್ಟೆ, ಇಬ್ರಾಹಿಂ ತಮುನಾಕ ಮಂಜೊಟ್ಟಿ, ಸಿದ್ದಿಕ್ ಮಸೀದಿಬಳಿ, ಅಶ್ರಫ್ ಗುಂಡೇರಿ, ಇಕ್ಬಾಲ್ ದರ್ಖಾಸ್ ನವಾಝ್ ಮಂಜೊಟ್ಟಿಹಾಗೂ ಸುಲೈಮಾನ್ ಕಟ್ಟೆ ಆಯ್ಕೆಯಾದರು.

Related posts

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya
error: Content is protected !!