37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

ಬೆಳ್ತಂಗಡಿ: ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತರ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಬಳಂಜ ಶಿಕ್ಷಣ ಟ್ರಸ್ಟ್ ,ಶಾಲಾಬಿವೃದ್ದಿ ಸಮಿತಿ ಬಳಂಜ ಮತ್ತು ಇತರ ಸಂಘ ಸಂಸ್ಥೆಗಳ ವತಿಯಿಂದ ಎಕ್ಸೆಲ್ ಕಾಲೇಜು ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ಜು. 26 ರಂದು ಅಭಿನಂದಿಸಲಾಯಿತು.

ಬಳಂಜ ಹೈಸ್ಕೂಲ್ ನ ಮುಖ್ಯೋಪಾಧ್ಯಾಯಿನಿ ಸುಲೋಚನಾ ಮಾತನಾಡಿ ಸರಕಾರಿ ಶಾಲಾ ತಾಲೂಕು ಮಟ್ಟದ ಕ್ರೀಡೋತ್ಸವಕ್ಕೆ ಸುಮಂತ್ ಕುಮಾರ್ ಜೈನ್ ರವರು ತುಂಬಾ ಪ್ರೋತ್ಸಾಹ ನೀಡಿ ಸರಕಾರಿ ಶಾಲಾ ಮಕ್ಕಳ ಬೆಳವಣಿಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸುಮಂತ್ ಕುಮಾರ್ ಜೈನ್ ನಾನು ಸರಕಾರಿ ಶಾಲೆ ಮತ್ತು ಉಜಿರೆ ಸಿದ್ದವನದಲ್ಲಿ ಶಿಕ್ಷಣ ಪಡೆದಿದ್ದು ಅಲ್ಲಿನ ಶಿಕ್ಷಣ ಈ ಸಾಧನೆಗೆ ಕಾರಣವಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಉತ್ತಮ ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎಂಬುದೇ ಎಕ್ಸೆಲ್ ಕಾಲೇಜಿನ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ಇದರ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಪೇರಂದಬೈಲ್, ಟ್ರಸ್ಟಿ ಪ್ರಮೋದ್ ಕುಮಾರ್ ಜೈನ್, ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!