ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಬಾರ್ಯ ಪಿಲಿಗೂಡು ಶ್ರೀ ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಮೋಹನ್ ಗೌಡ ಹಾಗೂ ತಾಲೂಕು ಜನಜಾಗೃತಿ ಕಾರ್ಯಾಕಾರಿಣಿ ಸದಸ್ಯ ಗುಣಕರ ಅಗ್ನಾಡಿ ಕೇಂದ್ರದ ಅಧ್ಯಕ್ಷೆ ಲೀಲಾವತಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ವಿ. ನಾಯಕ್ ಪೌಷ್ಟಿಕ ಆಹಾರ ದ ಬಗ್ಗೆ ಮಾಹಿತಿ ನೀಡಿದರು, ಕಾರ್ಯಕ್ರಮ ದಲ್ಲಿ ತಾಲೂಕು ಸಮನ್ವಯಧಿಕಾರಿ ಸೇವಾಪ್ರತಿನಿಧಿ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು, ಪೌಷ್ಟಿಕ ಆಹಾರ ತಯಾರಿ ಮಾಡಿಕೊಂಡು ಬಂದ ಸದಸ್ಯರು ಅನಿಸಿಕೆ ವ್ಯಕ್ತಪಡಿಸಿದರು.











