23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

ಕಕ್ಕಿಂಜೆ: ಇಲ್ಲಿಯ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ಥ್ ಕೆರೊಲಿನಾ ವೈದ್ಯಕೀಯ ವಿಧ್ಯಾರ್ಥಿಗಳ ತಂಡವು ಯೇನೆಪೊಯ ದಂತ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಜು.25 ರಂದು ಭೇಟಿ ನೀಡಿ ಗ್ರಾಮೀಣ ಪ್ರದೇಶದ ವೈದ್ಯಕೀಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ಚರ್ಚಿಸಿದರು,ಮತ್ತು ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಮಾಹಿತಿ ಪಡೆದರು.

ಆಸ್ಪತ್ರೆಯ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಮಾತನಾಡಿ ನಗರ ಪ್ರದೇಶಗಳಲ್ಲಿ ಸೌಲಭ್ಯಗಳ ಲಭ್ಯತೆ ಹೆಚ್ಚು ಇದ್ದು ಯಾವುದೇ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಹುದು. ಆದರೆ ಹಳ್ಳಿ ಪ್ರದೇಶಗಳಲ್ಲಿ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ನಿಭಾಯಿಸಲು ಕಷ್ಚಕರವಾಗಿದ್ದು, ಮತ್ತು ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇತರ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಮುಖ್ಯ ವೈದ್ಯಾಧಿಕಾರಿ ಡಾ.ಅಲ್ಬಿನ್ ಜೋಸೆಫ್, ವೈದ್ಯಾಧಿಕಾರಿಗಳಾದ ಡಾ. ಮೌಲ್ಯ, ಡಾ. ಶಾರೂನ್, ದಂತ ವೈದ್ಯಾಧಿಕಾರಿ ಡಾ. ಮಹಮ್ಮದ್ ಮಿಫ್ರಾ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ಪ್ರಮಾದ ಪ್ರಭಾಕರ್, ಡಾ.ಅಲಿ, ಮ್ಯಾನೇಜರ್ ಭರತ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!