ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಗೇರುಕಟ್ಟೆ: ಕರ್ನಾಟಕ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಮಂಗಳೂರು ಇದರ ಸಹಯೋಗದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನ ಕಳಿಯ ಶಾಖೆಯಲ್ಲಿ ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಮತ್ತು ಧರ್ಮದ ರಕ್ಷಣೆಗೆ ಭಾರತೀಯರೆಲ್ಲರೂ ದೃಢಸಂಕಲ್ಪ ಮಾಡಬೇಕೆಂದು ತಿಳಿಸಿ ದೇಶದ ರಕ್ಷಣೆಗಾಗಿ ಅಹರ್ನಿಶಿ ಕಾರ್ಯನಿರ್ವಹಿಸುವ ಯೋಧರ ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಸಾಮೂಹಿಕ ಪ್ರಾರ್ಥನೆಯು ಬಲವನ್ನು ನೀಡುವುದೆಂದರು.

ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯ ಬಗ್ಗೆ ಮಾತನಾಡಿದ ಸತೀಶ್ ನಾಳ ಭಾರತ-ಪಾಕ್ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ನೆಲೆಯೂರಿದ ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಯೋಧರು ತೋರಿದ ಪರಾಕ್ರಮವನ್ನು ತಿಳಿಸಿ ಹುತಾತ್ಮರಾದ ಸೈನಿಕರನ್ನು ಸ್ಮರಿಸುವುದು ನಮ್ಮ ಕರ್ತವ್ಯವೆಂದು ತಿಳಿಸಿದರು.

ಕೇಂದ್ರದ ಸಹ ಶಿಕ್ಷಕ ಸುಕೇಶ, ಸಂಚಾಲಕರಾದ ವಿಜಯ, ವರದಿ ಪ್ರಮುಖ ಕೇಶವ, ಅಶೋಕ, ವಸಂತ, ದಿವಾಕರ, ಮಧುಕರ, ರತ್ನಾಕರ, ಗಣೇಶ್, ಅವಿನಾಶ ಮತ್ತು ಅರುಣ ,ಭಾರತಿ, ಶುಭಮಂಗಳ, ಪದ್ಮಲತಾ, ಧರಿತ್ರಿ ಉಪಸ್ಥಿತರಿದ್ದರು. ಯೋಗ ಬಂಧು ಶಿವಣ್ಣ ವಂದಿಸಿದರು.

Related posts

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya
error: Content is protected !!