July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

ಬೆಳ್ತಂಗಡಿ: ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತರ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಬಳಂಜ ಶಿಕ್ಷಣ ಟ್ರಸ್ಟ್ ,ಶಾಲಾಬಿವೃದ್ದಿ ಸಮಿತಿ ಬಳಂಜ ಮತ್ತು ಇತರ ಸಂಘ ಸಂಸ್ಥೆಗಳ ವತಿಯಿಂದ ಎಕ್ಸೆಲ್ ಕಾಲೇಜು ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ಜು. 26 ರಂದು ಅಭಿನಂದಿಸಲಾಯಿತು.

ಬಳಂಜ ಹೈಸ್ಕೂಲ್ ನ ಮುಖ್ಯೋಪಾಧ್ಯಾಯಿನಿ ಸುಲೋಚನಾ ಮಾತನಾಡಿ ಸರಕಾರಿ ಶಾಲಾ ತಾಲೂಕು ಮಟ್ಟದ ಕ್ರೀಡೋತ್ಸವಕ್ಕೆ ಸುಮಂತ್ ಕುಮಾರ್ ಜೈನ್ ರವರು ತುಂಬಾ ಪ್ರೋತ್ಸಾಹ ನೀಡಿ ಸರಕಾರಿ ಶಾಲಾ ಮಕ್ಕಳ ಬೆಳವಣಿಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸುಮಂತ್ ಕುಮಾರ್ ಜೈನ್ ನಾನು ಸರಕಾರಿ ಶಾಲೆ ಮತ್ತು ಉಜಿರೆ ಸಿದ್ದವನದಲ್ಲಿ ಶಿಕ್ಷಣ ಪಡೆದಿದ್ದು ಅಲ್ಲಿನ ಶಿಕ್ಷಣ ಈ ಸಾಧನೆಗೆ ಕಾರಣವಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಉತ್ತಮ ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎಂಬುದೇ ಎಕ್ಸೆಲ್ ಕಾಲೇಜಿನ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ಇದರ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಪೇರಂದಬೈಲ್, ಟ್ರಸ್ಟಿ ಪ್ರಮೋದ್ ಕುಮಾರ್ ಜೈನ್, ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!